ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 JANUARY 2021
ಅಕಾಲಿಕ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಅಂತಹ ರೈತರಿಗೆ ಶೀಘ್ರದಲ್ಲಿ ಪರಿಹಾರ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಅಕಾಲಿಕ ಮಳೆಯಿಂದ ಅಪಾರ ಹಾನಿ ಸಂಭಿಸಿದೆ. ಹಾನಿಗೊಳಗಾದ ರೈತರ ಜಮೀನಿನ ಕರಿತು ಮಾಹಿತಿ ಪಡೆದು, ಕೂಲಂಕಷ ತನಿಖೆ ನಡೆಸಿ ಪರಿಹಾರ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ವಿಮೆ ಪಡೆಯಲು ಹಿಂದೇಟು
ಶಿವಮೊಗ್ಗ ಜಿಲ್ಲೆಯ ಹಲವು ರೈತರು ಬೆಳೆ ವಿಮೆ ಪಡೆಯುವಲ್ಲಿ ಹಿಂದೆ ಬಿದಿದ್ದಾರೆ. ಶಿಕಾರಿಪುರ, ಸೊರಬದ ರೈತರು ಬೆಳೆ ವಿಮೆ ಪಡೆಯುವಲ್ಲಿ ಮುಂದಿದ್ದಾರೆ. ಆದರೆ ತೀರ್ಥಹಳ್ಳಿ ಸಾಗರ, ಹೊಸನಗರ, ಭದ್ರಾವತಿಯ ರೈತರು ವಿಮೆ ಪಡೆಯುವಲ್ಲಿ ಹಿಂದಿದ್ದಾರೆ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಹಿರೇಕೆರೂರಿನಿಂದ ಕಾರ್ಕಳಕ್ಕೆ ತೆರಳುವ ಮಾರ್ಗ ಮಧ್ಯೆ ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಸಚಿವ ಬಿ.ಸಿ.ಪಾಟೀಲ್, ತುಂಗಾ ನದಿಯ ಕಮಾನು ಸೇತುವೆಯನ್ನು ವೀಕ್ಷಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್, ಉಪ ನಿರ್ದೇಶಕ ಬಸವರಾಜು, ಕೃಷಿ ಇಲಾಖೆ ಅಧಿಕಾರಿಗಳು, ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200