ಬಾಂಬ್ ಪತ್ತೆ ದಳ ಅಧಿಕಾರಿಗಳ ನಿರೀಕ್ಷೆಯಲ್ಲಿ, ಅವರು ಬಂದ ಬಳಿಕವೇ ಉಳಿದ ಕಾರ್ಯಾಚರಣೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021

ಹುಣಸೋಡು ಸ್ಫೋಟ ಸಂಬಂಧ ಪರಿಶೀಲನೆಗೆ ಬೆಂಗಳೂರು ಮತ್ತು ಮಂಗಳೂರನಿಂದ ತಜ್ಞರ ಟೀಂ ಆಗಮಿಸಲಿದೆ. ರಾತ್ರಿಯೇ ಈ ತಂಡಗಳಿಗೆ ಬುಲಾವ್ ನೀಡಲಾಗಿದ್ದು, ಪರಿಶೀಲನೆ ಬಳಿಕವೆ ಮುಂದಿನ ಕಾರ್ಯಾಚರಣೆ ನಡೆಸಲಾಗುತ್ತದೆ.

ಬಾಂಬ್ ನಿಷ್ಕ್ರಿಯ ದಳ (ಬಿಡಿಡಿಎಸ್) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅವರ ಪರಿಶೀಲನೆ ಬಳಿಕವೆ, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಮೆಡಿಕಲ್ ಟೀಂ ಶೋಧ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

ಮತ್ತಷ್ಟು ಸ್ಫೋಟದ ಆತಂಕ

ಭಾರಿ ಪ್ರಮಾಣದ ಸ್ಫೋಟಕ ತಂದಿರುವ ಹಿನ್ನೆಲೆಯಲ್ಲಿ , ಅವೆಲ್ಲವು ರಾತ್ರಿಯೇ ಸ್ಫೋಟಗೊಂಡಿರಬಹುದು. ಒಂದು ವೇಳೆ ಕೆಲವು ಸ್ಫೋಟಕಗಳು ಸಜೀವ ಸ್ಥಿತಿಯಲ್ಲಿದ್ದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾದ್ಯೆ ಇದೆ. ಹಾಗಾಗಿ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಪರಿಶೀಲಿಸಿದ ಬಳಿಕವೆ ಮುಂದಿನ ಕಾರ್ಯಾಚರಣೆ ನಡೆಯಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment