ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ನಿಗೂಢ ಶಬ್ದ, ಭೂಕಂಪನದ ಅನುಭವದಿಂದಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯಾಗಿದೆ. ಈ ನಡುವೆ ಪ್ರಮುಖ ಜಲಾಶಯಗಳ ಸುರಕ್ಷತೆಯ ಕುರಿತು ಜನ ಭಯಗೊಂಡಿದ್ದರು.
ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಜಲಾಶಯಗಳಿಗೆ ಭೇಟಿ ನೀಡಿ, ಸುರಕ್ಷತಾ ಕ್ರಮಗಳ ಕುರಿತು ಪರಿಶಿಲಿಸಿದರು. ಎಂಜಿನಿಯರ್ಗಳ ಜೊತೆ ಚರ್ಚೆ ನಡೆಸಿದರು.
ರಾತ್ರೋರಾತ್ರಿ ಭದ್ರಾ ಡ್ಯಾಂಗೆ ಭೇಟಿ
ಕಂಪನದ ಅನುಭವವಾಗುತ್ತಿದ್ದಂತೆ ಪವಿತ್ರಾ ರಾಮಯ್ಯ ಅವರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದರು. ಎಂಜಿನಿಯರ್ಗಳ ಜೊತೆ ಚರ್ಚೆ ನಡೆಸಿದರು. ನಡುರಾತ್ರಿಯಲ್ಲೇ ಭದ್ರಾ ಅಣೆಕಟ್ಟೆಯ ಪರಿಶೀಲನೆ ನಡೆಸಿದರು. ಅಲ್ಲದೆ, ಭದ್ರಾ ಜಲಾನಯನ ವ್ಯಾಪ್ತಿಯ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಗಾಜನೂರಿಗೆ ಅಧ್ಯಕ್ಷರ ವಿಸಿಟ್
ಗಾಜನೂರಿನ ತುಂಗಾ ಜಲಾಯಶಕ್ಕೆ ಇವತ್ತು ಬೆಳಗ್ಗೆ ಭದ್ರಾ ಕಾಡ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ ನೀಡಿದ್ದರು. ಇಲ್ಲಿಯೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಜಲಾಶಯದ ಸುರಕ್ಷತೆ ದೃಷ್ಟಿಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

About The Editor
ನಿತಿನ್ ಆರ್.ಕೈದೊಟ್ಲು






