SHIMOGA | ‘ಏನ್ ಮಗಾ?’ ಅಂತಾ ಕರೆದಿದ್ದಕ್ಕೆ ಕಿರಿಕ್, ಒಬ್ಬನ ಮರ್ಡರ್, ಸಿಟಿಯಲ್ಲಿ ಬಿಗಿ ಬಂದೋಬಸ್ತ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021

ಬಾರ್‍ನಲ್ಲಿ ಕ್ಷುಲಕ ವಿಚಾರಕ್ಕೆ ನಡೆದ ಗಲಾಟೆ ಒಬ್ಬನ ಕೊಲೆಗೆ ಕಾರಣವಾಗಿದೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಇನ್ನು, ಈ ಕಿರಿಕ್‍ ಮತ್ತು ಕೊಲೆ ಗಂಭೀರ ಸ್ವರೂಪ ಪಡೆದುಕೊಳ್ಳಬಾರದು ಎಂಬ ಕಾರಣಕ್ಕೆ, ಶಿವಮೊಗ್ಗ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಕ್ಷುಲಕ ಕಾರಣವೇನು?

ಶಿವಮೊಗ್ಗದ ಎನ್‍.ಟಿ.ರಸ್ತೆಯ ಸುಂದರ ಆಶ್ರಯ ಬಾರ್‍ನಲ್ಲಿ ಗಲಾಟೆಯಾಗಿ, ಕೆ.ಆರ್‍.ಪುರಂ ನಿವಾಸಿ ಜೀವನ್‍ ಎಂಬಾತನ ಕೊಲೆಯಾಗಿದೆ. ಸೀಗೆಹಟ್ಟಿಯ ಕೇಶವ್ ಶೆಟ್ಟಿಗೆ ಗಂಭೀರ ಗಾಯವಾಗಿದೆ. ಬಾರ್‍ನಲ್ಲಿ ಪಾರ್ಟಿ ಮಾಡುವ ಹೊತ್ತಿಗೆ, ಜೀವನ್‍ನ ಸಹೋದರ ಸ್ವರೂಪ್‍, ಅಪರಿಚಿತನೊಬ್ಬನಿಗೆ ‘ಏನ್ ಮಗಾ’ ಎಂದು ಬೆನ್ನ ಮೇಲೆ ಕೈ ಇಟ್ಟಿದ್ದೆ ಗಲಾಟೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಅಪರಿಚಿತನ ಜೊತೆ ಕಿರಿಕ್

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವರೂಪ್‍, ಜೀವನ್ ಮತ್ತು ನನ್ನ ಸ್ನೇಹಿತರು ಸಿಕ್ಕಿದ್ದರು. ಪಾರ್ಟಿ ಮಾಡೋಕೆ ಅಂತಾ ಹೋಗಿದ್ದೆವು. ಫೋನ್ ಬಂದಿದ್ದರಿಂದ ಬಾರ್‍ನಿಂದ ಹೊರಗೆ ಹೋಗಿ ಹಿಂತಿರುಗಿದೆ. ಸ್ನೇಹಿತನೊಬ್ಬನನ್ನು ಕಂಡಂತೆ ಆಯ್ತು. ಹಾಗಾಗಿ ಒಬ್ಬ ಯುವಕನ ಬೆನ್ನ ಮೇಲೆ ಕೈ ಹಾಕಿ ‘ಏನ್ ಮಗಾ ಇಲ್ಲಿ’ ಎಂದು ವಿಚಾರಿಸಿದೆ. ಆದರೆ ಆತ ನನ್ನ ಸ್ನೇಹಿತನಾಗಿರಲಿಲ್ಲ. ಸಾರಿ ಕೇಳಿದೆ. ಆದರೆ ಆತನ ಜೊತೆಗಿದ್ದವರು ಜಗಳ ತೆಗೆದರು ಎಂದು ವಿವರಿಸಿದರು.

ಜಗಳ ಬಿಡಿಸಿದ ಸ್ನೇಹಿತರು

ಜಗಳ ಆಗುತ್ತಿದ್ದದ್ದನ್ನು ಗಮನಿಸಿದ ಸ್ವರೂಪ್ನ ಸ್ನೇಹಿತರು, ಮಧ್ಯಪ್ರವೇಶಿಸಿದ್ದಾರೆ. ಜಗಳ ಬಿಡಿಸಿದ್ದಾರೆ. ‘ಸ್ವಲ್ಪ ಹೊತ್ತಿನ ಬಳಿಕ ಪಾರ್ಟಿ ಮುಗಿಸಿ ಜೀವನ್ ಮತ್ತು ಕೇಶವ್ ಶೆಟ್ಟಿ ಹೊರಗೆ ಹೋಗಿದ್ದಾರೆ. ಈ ವೇಳೆ ಅವರ ಮೇಲೆ ಹಲ್ಲೆಯಾಗಿದೆ. ನಾವು ಹೋಗಿ ಅವರನ್ನು ಆಸ್ಪತ್ರೆಗೆ ಸೇರಿಸಿದೆವು’ ಎಂದು ಸ್ವರೂಪ್ ತಿಳಿಸಿದ್ದಾರೆ.

ಇದನ್ನೂ ಓದಿ | SHIMOGA CRIME | ಯುವಕನ ಬರ್ಬರ ಹತ್ಯೆ, ಮತ್ತೊಬ್ಬನಿಗೆ ಗಂಭೀರ ಗಾಯ, ತಡರಾತ್ರಿ ಕೃತ್ಯ

ಮೂವರ ಮೇಲೆ ಅಟ್ಯಾಕ್

ಘಟನೆಯಲ್ಲಿ ಮೂವರ ಮೇಲೆ ಅಟ್ಯಾಕ್ ಮಾಡಲಾಗಿದೆ ಎಂದು ಸ್ವರೂಪ್ ತಿಳಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಜೀವನ್ ಅಸುನೀಗಿದ್ದಾರೆ. ಕೇಶವ್ ಶೆಟ್ಟಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಬ್ಬರಿಗೆ ಗಾಯವಾಗಿದ್ದು, ಅವರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ನಗರಾದ್ಯಂತ ಬಿಗಿ ಬಂದೋಬಸ್ತ್

ಕೊಲೆ, ಹಲ್ಲೆ ವಿಚಾರ ತಿಳಿಯುತ್ತಿದ್ದಂತೆ ನಗರಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಹೊರ ಜಿಲ್ಲೆಯ ಪೊಲೀಸರನ್ನು ನಗರಕ್ಕೆ ಕರೆಯಿಸಿಕೊಳ್ಳಲಾಗಿದೆ. ಪೂರ್ವ ವಲಯ ಐಜಿಪಿ ಎಸ್.ರವಿ ಅವರು ಜಿಲ್ಲೆಗೆ ಆಗಮಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಬಂದೋಬಸ್ತ್ ಕೈಗೊಂಡಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 28, 2021

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

Leave a Comment