SHIMOGA | ಕ್ಯಾನ್ಸರ್‌ಗೆ ತುತ್ತಾದ ನೌಕರರಿಗೆ ಸಾಂದರ್ಭಿಕ ರಜೆ, ಏಪ್ರಿಲ್ 1ರಿಂದ ಆರೋಗ್ಯ ಸಿರಿ, ಏನಿದು ಯೋಜನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021

ಕ್ಯಾನ್ಸರ್ ಕಾಯಿಲೆಗೆ ತುತ್ತಾದ ಸರ್ಕಾರಿ ನೌಕರರಿಗೆ ಸಾಂದರ್ಭಿಕ ರಜೆ ಮಂಜೂರು ಮಾಡವ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಕ್ಯಾನ್ಸ‍ರ್ ಚಿಕಿತ್ಸೆಗೆ ರೇಡಿಯೇಷನ್, ಕಿಮೋಥೆರಪಿ ಮಾಡಿಸಲು ಈ ಸಾಂದರ್ಭಿಕ ರಜೆ ಅನುಕೂಲವಾಗಲಿದೆ ಎಂದರು.

ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ಆರೋಗ್ಯ ಸಿರಿ ಯೋಜನೆ

ರಾಜ್ಯ ಸರ್ಕಾರಿ ನೌಕರರ ಅನುಕೂಲಕ್ಕಾಗಿ ಏಪ್ರಿಲ್ 1ರಿಂದ ಆರೋಗ್ಯ ಸಿರಿ ಯೋಜನೆ ಜಾರಿಯಾಗಲಿದೆ ಎಂದು ಷಡಾಕ್ಷರಿ ತಿಳಿಸಿದ್ದಾರೆ.

ಆರೋಗ್ಯ ಸರಿ ಯೋಜನೆಗಾಗಿ ಪ್ರತ್ಯೇಕ ಸಾಫ್ಟ್‍ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ.

ಸರ್ಕಾರಿ ನೌಕರರು ಒಳ, ಹೊರ ರೋಗಿಗಳಾಗಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ.

ಎಲ್ಲ ವಿಧದ ಔಷಧ, ಮೆಡಿಕಲ್ ಇಮೇಜಿಂಗ್ ಸ್ಕ್ಯಾನಿಂಗ್, ಲ್ಯಾಬೊರೇಟರಿ ಪರೀಕ್ಷೆಗಳು, ವಾಹನ ಸೌಲಭ್ಯ ಉಚಿತವಾಗಿ ಲಭಿಸಲಿದೆ.

144290116 1321704384857645 715175339082447623 o.jpg? nc cat=103&ccb=2& nc sid=8bfeb9& nc ohc=bugeZfURlskAX8riacP& nc ht=scontent.fblr1 5

ನೌಕರರಿಗೆ ಆನ್‍ ಲೈನ್ ತರಗತಿ

ರಾಜ್ಯ ಸರ್ಕಾರಿ ನೌಕರರು ಅಕೌಂಟ್ಸ್ ಹೈಯರ್, ಲೋಯರ್ ಮತ್ತು ಜನರಲ್ ಲಾ ಭಾಗ 1 ಮತ್ತು 2 ಇಲಾಖೆ ಪರೀಕ್ಷೆ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಎದುರಿಸಲು ಆನ್ ಲೈನ್ ಕ್ಲಾಸ್ ಆಯೋಜಿಸಲಾಗಿತ್ತಿದೆ. ಸರ್ಕಾರಿ ನೌಕರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಷಡಾಕ್ಷರಿ ತಿಳಿಸಿದರು.

ಸಂಘದ ಗೌರವಾಧ್ಯಕ್ಷ ರಮೇಶ್, ಬೆಂಗಳೂರು ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್ ಕುಮಾರ್, ಕಾರ್ಯದರ್ಶಿ ಐ.ಪಿ.ಶಾಂತಾಜ್, ಉಪಾಧ್ಯಕ್ಷ ಪಾಪಣ್ಣ, ಪ್ರಮುಖರಾದ ಆರ್.ಮಾರುತಿ, ದಿನೇಶ್, ಸತೀಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 4, 2021

Leave a Comment