ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021
ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಜೆಡಿಯು ಕಾರ್ಯಕರ್ತರು ಧರಣಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಖಾಲಿ ಸಿಲಿಂಡರ್ ಇರಿಸಿಕೊಂಡು ಧರಣಿ ನಡೆಸಲಾಯಿತು.
ಜೆಡಿಯು ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ನೇತೃತ್ವದಲ್ಲಿ ವಿಭಿನ್ನವಾಗಿ ಧರಣಿ ನಡೆಸಲಾಯಿತು.
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡಲೆ ಇಳಿಸಬೇಕು. ಜನರು ಸಂಕಷ್ಟಕ್ಕೀಡಾಗಿದ್ದು, ಬೆಲೆ ಏರಿಕೆಯಿಂದ ಜೀವನ ದುಸ್ತರವಾಗಿದೆ. ಹಾಗಾಗಿ ತೈಲೋತ್ಪನ್ನಗಳ ಬೆಲೆ ಇಳಿಸಬೇಕು ಎಂದು ಪ್ರಧಾನಿಗೆ ಮನವಿ ಮಾಡಿದರು.
ಇನ್ನು, ಪಡಿತರ ವಿತರಣಾ ಕೇಂದ್ರಗಳಲ್ಲಿ ನಾಲ್ಕು ದಿನ ಮಾತ್ರ ಪಡಿತರ ವಿತರಣೆ ಮಾಡಲಾಗುತ್ತಿದೆ. ಇದನ್ನು ವಾರ ಪೂರ್ತಿ ಮಾಡಬೇಕು ಎಂದು ಶಶಿಕುಮಾರ್ ಗೌಡ ಒತ್ತಾಯಿಸಿದರು.
ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






