ಯತ್ನಾಳ್ ಹಾವು, ಚೇಳು ಹೇಳಿಕೆಗೆ ಶಿವಮೊಗ್ಗದಲ್ಲಿ ಕಗ್ಗದ ಮೂಲಕ ವಿಜಯೇಂದ್ರ ತಿರುಗೇಟು, ಏನು ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021

ಹಾವು, ಚೇಳುಗಳು ಯಡಿಯೂರಪ್ಪ ಅವರ ಕುಟುಂಬದಲ್ಲೇ ಇದ್ದಾವೆ ಎಂದು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಮಂಕುತಿಮ್ಮನ ಕಗ್ಗವನ್ನು ಉಲ್ಲೇಖಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ,  ನಾನು ಹಾವು ಚೇಳು ಅಂತಾ ಉಲ್ಲೇಖ ಮಾಡಿದ್ದು ರಾಜಕೀಯ ವಿರೋಧಿಗಳಿಗೆ. ಡಿವಿಜಿಯವರು ಕಾಯಲು ಮೇಲೊಬ್ಬನಿರುವಾಗ ಕಾಯಕವಿಲ್ಲದವನ ಕೊಂಕು ಮಾತಿಗೆ ಕೊರಗುವುದೇಕೆ ಎಂದು ಹೇಳಿದ್ದಾರೆ. ವೈಯಕ್ತಿಕ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನಿಡುವುದಿಲ್ಲ  ಎಂದು ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದರು.

ಮಸ್ಕಿ ಜವಾಬ್ದಾರಿ, ಗೆಲುವು ನಿಶ್ಚಿತ

ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭೆ ಕ್ಷೇತ್ರಗಳಿಗೆ ಸದ್ಯದಲ್ಲೇ ಉಪ ಚುನಾವಣೆ ಘೋಷಣೆ ಆಗಲಿದೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ತಮಗೆ ಮಸ್ಕಿ  ಕ್ಷೇತ್ರದ ಜವಾಬ್ದಾರಿ ನೀಡಿದ್ದಾರೆ. ಈ ಹಿಂದೆ ಉಪ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ಹಾಗೆ ಈ ಬಾರಿಯೂ ಗೆಲುವು ಸಾಧಿಸಲಿದೆ. ಮತದಾರರು ಯಡಿಯೂರಪ್ಪ ಅವರ ಕೈ ಬಲಪಡಿಸಲಿದ್ದಾರೆ ಎಂದರು.

ಕುಮಾರಸ್ವಾಮಿ ಅವರನ್ನು ಜನ ಮರೆತಿದ್ದರು

ರಾಮ ಮಂದಿರ ನಿಧಿಗೆ ದೇಣಿಗೆ ನೀಡದ ಮನೆಗಳನ್ನು ಗುರುತು ಹಾಕಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ ವಿಜಯೇಂದ್ರ, ಕಳೆದ ಎರಡು ವರ್ಷದಿಂದ ರಾಜ್ಯದ ಜನರು ಕುಮಾರಸ್ವಾಮಿ ಅವರನ್ನು ಮರೆತಿದ್ದರು. ಜನರಿಗೆ ನೆನಪು ಮಾಡಲು ಈ ರೀತಿ ಹೇಳಿಕೆ ನೀಡಿರಬಹುದು. ಅದರೆ ಅವರ ಹೇಳಿಕೆಯನ್ನು ಗಂಭೀರವಾಗಿ ಸ್ವೀಕರಿಸುವುದಿಲ್ಲ ಎಂದರು.

ವರ್ಗಾವಣೆ ವಿಚಾರಕ್ಕೂ ನಂಗೂ ಸಂಬಂಧವಿಲ್ಲ

ಐಎಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ವರ್ಗಾವಣೆ ಪ್ರಕ್ರಿಯೆಗಳು ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ನಾನು ಬಿಜೆಪಿ ಪಕ್ಷದ ಉಪಾಧ್ಯಕ್ಷ. ಹಾಗಾಗಿ ಈ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ಮೀಸಲಾತಿ ಬಗ್ಗೆ ತಜ್ಞರ ಜೊತೆ ಚರ್ಚೆ

ನಮ್ಮ ಸರ್ಕಾರ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ, ಬೇಡಿಕೆಗಳ ವಿರುದ್ಧ  ಇಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ಕುರಿತು ತಜ್ಞರ ಜೊತೆ ಸಿಎಂ ಅವರು ಚರ್ಚೆ ನಡೆಸಿ, ಕಾನೂನು ಚೌಕಟ್ಟಿನಲ್ಲಿ  ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ವಿಜಯೇಂದ್ರ ತಿಳಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment