ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021
ಕಾರಿನಲ್ಲಿ ಬಂದ ಮುಸುಕುಧಾರಿಗಳು ಮನೆಯೊಳಗೆ ನುಗ್ಗಿ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸಹೋದರರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟಿಪ್ಪು ನಗರದ ಏಳನೆ ಅಡ್ಡರಸ್ತೆಯಲ್ಲಿರುವ ಮನೆಯೊಂದರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದರು. ಸಯ್ಯದ್ ಇಮ್ರಾನ್ (45) ಮತ್ತು ಸಯ್ಯದ್ ಸಾದಿಕ್ (40) ಎಂಬುವವರ ಮೇಲೆ ಹಲ್ಲೆ ಮಾಡಲಾಗಿದೆ.
ಹೇಗಾಯ್ತು ಘಟನೆ?
ಇವತ್ತು ಮಧ್ಯಾಹ್ನ ಟಿಪ್ಪು ನಗರಕ್ಕೆ ಕಾರಿನಲ್ಲಿ ಬಂದ ಮುಸುಕುಧಾರಿಗಳು ದಾಳಿ ನಡೆಸಿದ್ದಾರೆ. ನಾಲ್ಕೈದು ಯುವಕರು ಈ ಗುಂಪಿನಲ್ಲಿದ್ದರು. ಏಕಾಏಕಿ ದಾಳಿ ನಡೆಸಿ, ಸಯ್ಯದ್ ಇಮ್ರಾನ್ನ ಕೈಗಳಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಇನ್ನು ಸಾದಿಕ್ನ ಬೆರಳು, ಕಿವಿ ಭಾಗಕ್ಕೆ ಗಾಯವಾಗಿದೆ.
ಹಲ್ಲೆಗೆ ಕಾರಣವೇನು?
ಎರಡು ದಿನದ ಹಿಂದೆ ಸಯ್ಯದ್ ಇಮ್ರಾನ್ ತುಂಗಾ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ದಾಳಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ರೌಡಿ ಶೀಟರ್ ಬಚ್ಚನ್ ಹೆಸರಿನಲ್ಲಿ ಕೆಲವು ಯುವಕರು ಇಮ್ರಾನ್ ಬಳಿ ಹಣಕ್ಕೆ ಪೀಡಿಸುತ್ತಿದ್ದರು ಎಂದು ಆರೋಪಿಸಿ ದೂರು ನೀಡಲಾಗಿದೆ. ಇದೇ ಜಿದ್ದಿನಲ್ಲಿ ಇಮ್ರಾನ್ ಮತ್ತು ಆತನ ಸಹೋದರರ ಮೇಲೆ ದಾಳಿಯಾಗಿರುವ ಸಾದ್ಯತೆ ಎಂದು ಪೊಲೀಸರು ತಿಳಿಸಿದ್ದಾರೆ.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು, ಆಸ್ಪತ್ರೆಗೆ ದಾಖಲಾಗಿರುವ ಇಮ್ರಾನ್ ಮತ್ತು ಸಾದಿಕ್ ಚೇತರಿಸಿಕೊಳ್ಳುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






