
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ತಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿರುವುದು ಸರಿಯಷ್ಟೇ. ಆದರೆ, 13 ವರ್ಷ ಕಳೆದರೂ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಿಲ್ಲ. ಹಾಗಾಗಿ ಶೀಘ್ರವೇ ನಿವೇಶನ ಹಂಚಿಕೆ ಮಾಡಬೇಕು ಎಂದು ಸಂತ್ರಸ್ತರು ಒತ್ತಾಯಿಸಿದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಈ ಬಗ್ಗೆ ಪರಿಶೀಲಿಸಿ ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದರು.
ಈ ವೇಳೆ ಪಿಎಲ್ಡಿ ಬ್ಯಾಂಕ್ನ ಉಪಾಧ್ಯಕ್ಷರಾದ ಆರ್.ವಿಜಯಕುಮಾರ್, ಸೋಗಾನೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅನಿಲ್, ಸದಸ್ಯರಾದ ಹೇಮೇಶ್ ನಾಯ್ಕ್, ಸುಮಿತ್ರಮ್ಮ, ಮುಖಂಡರಾದ ಅರುಣ್ ನಾಯ್ಡು, ಹೇಮಂತ್, ನಾಗರಾಜ್ ಮತ್ತಿತರರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






