ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ 13 ವರ್ಷವಾದರೂ ಸಿಕ್ಕಿಲ್ಲ ನಿವೇಶನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ತಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿರುವುದು ಸರಿಯಷ್ಟೇ. ಆದರೆ, 13 ವರ್ಷ ಕಳೆದರೂ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಿಲ್ಲ. ಹಾಗಾಗಿ ಶೀಘ್ರವೇ ನಿವೇಶನ ಹಂಚಿಕೆ ಮಾಡಬೇಕು ಎಂದು ಸಂತ್ರಸ್ತರು ಒತ್ತಾಯಿಸಿದರು.

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಈ ಬಗ್ಗೆ ಪರಿಶೀಲಿಸಿ ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದರು.

ಈ ವೇಳೆ ಪಿಎಲ್‌ಡಿ ಬ್ಯಾಂಕ್‌ನ ಉಪಾಧ್ಯಕ್ಷರಾದ ಆರ್‌.ವಿಜಯಕುಮಾರ್, ಸೋಗಾನೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅನಿಲ್, ಸದಸ್ಯರಾದ ಹೇಮೇಶ್ ನಾಯ್ಕ್, ಸುಮಿತ್ರಮ್ಮ, ಮುಖಂಡರಾದ ಅರುಣ್ ನಾಯ್ಡು, ಹೇಮಂತ್, ನಾಗರಾಜ್ ಮತ್ತಿತರರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment