ಶಿವಮೊಗ್ಗದಲ್ಲಿ ಪದಬಂಧ ಸ್ಪರ್ಧೆ, ಎಲ್ಲಿ ನಡೆಯುತ್ತೆ? ಯಾರೆಲ್ಲ ಭಾಗವಹಿಸಬಹುದು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಫೆ.21ರಂದು ಕಮಲಾ ನೆಹರು ಕಾಲೇಜಿನಲ್ಲಿ ಸಾರ್ವಜನಿಕರಿಗೆ ಪದಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಬಳಗದ ಕಾರ್ಯದರ್ಶಿ  ಆರ್.ಅಚ್ಯುತರಾವ್ ತಿಳಿಸಿದರು.

149738831 1330866007274816 1660660990934850170 o.jpg? nc cat=106&ccb=3& nc sid=8bfeb9& nc ohc=siQ k1RLzNsAX9m5ybe& nc ht=scontent.fblr4 3

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ ದಿನ ಬೆಳಗ್ಗೆ 11ರಿಂದ 12ರವರೆಗೆ ಈ ಸ್ಪರ್ಧೆ ನಡೆಯಲಿದೆ. 10 ಗಂಟೆಯಿಂದ ಸ್ಪರ್ಧಾ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದಾಗಿದೆ. ಪ್ರವೇಶ ಶುಲ್ಕ ಒಬ್ಬರಿಗೆ 20 ರೂ. ನಿಗದಿ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ 8 ಪದಬಂಧಗಳನ್ನು ಬಿಡಿಸಬೇಕಾಗುತ್ತದೆ. ಇದರಲ್ಲಿ ಒಂದು ಸಂಖ್ಯಾ ಬಂಧ ಎಂಬ ವಿಭಿನ್ನ ಸ್ಪರ್ಧೆಯು ಇದೆ. ಭಾಗವಹಿಸುವವರಿಗೆ ವಯೋಮಿತಿಯಿಲ್ಲ. ಸ್ಪರ್ಧಾ ಸಮಯದಲ್ಲಿ ಮೊಬೈಲ್ ಬಳಕೆಗೆ ಅವಕಾಶವಿರುತ್ತದೆ. ಆದರೆ, ಮಾತನಾಡುವಂತಿಲ್ಲ ಎಂದರು.

ಮಾರ್ಚ್‍ 7ರಂದು ಕರ್ನಾಟಕ ಸಂಘದಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಪ್ರಥಮ ಬಹುಮಾನ 3 ಸಾವಿರ ರೂ., ದ್ವಿತೀಯ ಬಹುಮಾನ 2 ಸಾವಿರ ರೂ., ತೃತೀಯ ಬಹುಮಾನ  1 ಸಾವಿರ ರೂ. ಹಾಗೂ ತಲಾ 500ರೂ. ನ ನಾಲ್ಕು ಸಮಾಧಾನಕರ ಬಹುಮಾನಗಳಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಳಗದ ಗೌರವಾಧ್ಯಕ್ಷ ಜಿ.ಎಸ್. ನಾಗರಾಜು, ಉಪಾಧ್ಯಕ್ಷರಾದ ಡಾ. ಚಿತ್ರಲೇಖಾ, ಎಸ್. ನಾಗೇಶ್, ನಿರ್ದೇಶಕರಾದ ಆಚಿ ಪ್ರಕಾಶ್, ಜಿ.ಎಸ್. ಅನಂತ, ಹರೀಶ್ ಕಾರ್ಣಿಕ್, ಚೇತನ್ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment