ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 21 FEBRUARY 2021
ಬೈಕ್ನಿಂದ ಆಗಾಗ ಮಾರಕಾಸ್ತ್ರಗಳನ್ನು ಹೊರತೆಗೆದು, ಒಳಗೆ ಇಡುವುದನ್ನು ಮಾಡುತ್ತ, ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದೆ ದೊಡ್ಡಪೇಟೆ ಠಾಣೆ ಪೊಲೀಸರು, ಯುವಕನನ್ನು ಅರೆಸ್ಟ್ ಮಾಡಿ, ಮಾರಕಾಸ್ತ್ರವನ್ನು ವಶಕ್ಕೆ ಪಡೆದಿದ್ದಾರೆ.
ಆರ್ಎಂಎಲ್ ನಗರದ ಶಫೀವುಲ್ಲಾ ಬಂಧಿತ. ಕೆಎಸ್ಆರ್ಟಿಸಿ ಬಸ್ ಡಿಪೋ ಬಳಿ ಬೈಕ್ನಲ್ಲಿ ಮಾರಕಾಸ್ತ್ರ ತಂದಿದ್ದ. ಪದೇ ಪದೇ ಅದನ್ನು ಹೊರಗೆ ತೆಗೆಯುವುದು, ಒಳಗೆ ಇಡುವುದು ಮಾಡುತ್ತಿದ್ದ. ಇದರಿಂದ ಆತಂಕಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ, ದೊಡ್ಡಪೇಟೆ ಇನ್ಸ್ಪೆಕ್ಟರ್ ವಸಂತ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪಿಎಸ್ಐ ಶಂಕರಮೂರ್ತಿ, ಸಿಬ್ಬಂದಿಗಳಾದ ಹೆಚ್.ಶೇಖರ್, ಲಚ್ಚಾನಾಯ್ಕ, ಸುದರ್ಶನ್, ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ 50,220 ರೂ. ನಗದು, ಲಾಂಗು, ಮೊಬೈಲ್, ಬೈಕ್ ವಶಕ್ಕೆ ಪಡೆಯಲಾಗಿದೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















