
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 21 FEBRUARY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೈಕ್ನಿಂದ ಆಗಾಗ ಮಾರಕಾಸ್ತ್ರಗಳನ್ನು ಹೊರತೆಗೆದು, ಒಳಗೆ ಇಡುವುದನ್ನು ಮಾಡುತ್ತ, ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದೆ ದೊಡ್ಡಪೇಟೆ ಠಾಣೆ ಪೊಲೀಸರು, ಯುವಕನನ್ನು ಅರೆಸ್ಟ್ ಮಾಡಿ, ಮಾರಕಾಸ್ತ್ರವನ್ನು ವಶಕ್ಕೆ ಪಡೆದಿದ್ದಾರೆ.
ಆರ್ಎಂಎಲ್ ನಗರದ ಶಫೀವುಲ್ಲಾ ಬಂಧಿತ. ಕೆಎಸ್ಆರ್ಟಿಸಿ ಬಸ್ ಡಿಪೋ ಬಳಿ ಬೈಕ್ನಲ್ಲಿ ಮಾರಕಾಸ್ತ್ರ ತಂದಿದ್ದ. ಪದೇ ಪದೇ ಅದನ್ನು ಹೊರಗೆ ತೆಗೆಯುವುದು, ಒಳಗೆ ಇಡುವುದು ಮಾಡುತ್ತಿದ್ದ. ಇದರಿಂದ ಆತಂಕಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ, ದೊಡ್ಡಪೇಟೆ ಇನ್ಸ್ಪೆಕ್ಟರ್ ವಸಂತ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪಿಎಸ್ಐ ಶಂಕರಮೂರ್ತಿ, ಸಿಬ್ಬಂದಿಗಳಾದ ಹೆಚ್.ಶೇಖರ್, ಲಚ್ಚಾನಾಯ್ಕ, ಸುದರ್ಶನ್, ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ 50,220 ರೂ. ನಗದು, ಲಾಂಗು, ಮೊಬೈಲ್, ಬೈಕ್ ವಶಕ್ಕೆ ಪಡೆಯಲಾಗಿದೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






