ಹೊಸನಗರದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ, ಕಾರಣವೇನು? ಎನೇನು ವೀಕ್ಷಿಸಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021

ನಟ ನೀನಾಸಂ ಸತೀಶ್ ಅವರು ಇವತ್ತು ಮುತ್ತಲ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಅಲ್ಲದೆ, ಇಲ್ಲಿ ಕೆರೆಗಳ ಪುನಶ್ಚೇತನ ಕಾರ್ಯವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ಹೊಸನಗರ ತಾಲೂಕಿನ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿದರು. ಇಲ್ಲಿನ ಶಾಲೆ, ಗ್ರಾಮದ ವಿವಿಧೆಡೆ ಸತೀಶ್ ಅವರು ಭೇಟಿ ನೀಡಿ, ಹಿರಿಯರು, ಯುವಕರನ್ನು ಭೇಟಿಯಾದರು.

ಕೆರೆಗಳ ಪುನಶ್ಚೇತನಕ್ಕೆ ಮೆಚ್ಚುಗೆ

ಸಾರಾ ಸಂಸ್ಥೆಯು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮುತ್ತಲ ಗ್ರಾಮಸ್ಥರ ನೆರವಿನಿಂದ ವಿವಿಧ ಕೆರೆಗಳ ಪುನಶ್ಚೇತನ ಮಾಡಿದೆ. ಈ ಕೆರೆಗಳನ್ನು ವೀಕ್ಷಿಸಿದ ನಟ ನೀನಾಸಂ ಸತೀಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಕಾರ್ಯಗಳು ಅಕ್ಕಪಕ್ಕದ ಊರುಗಳಿಗೆ, ರಾಜ್ಯದ ಇತರೆ ಗ್ರಾಮಗಳಿಗೂ ಮಾದರಿಯಾಗಬೇಕು ಎಂದರು.

ಮುತ್ತಲ ಗ್ರಾಮದಲ್ಲಿ ಕೆರೆಗಳ ಪುನಶ್ಚೇತನ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಅದೆ ರೀತಿ ಇಲ್ಲಿ ಗ್ರಾಮಸ್ಥರು ಒಗ್ಗಟ್ಟಿನಿಂದ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡಿದ್ದಾರೆ. ಕೆರೆಗಳ ಪುನಶ್ಚೇತನದಿಂದ ಇಲ್ಲಿನ ನೂರಾರು ಎಕರೆಗೆ ನೀರು ಸಿಗುತ್ತಿದೆ. ಬಾವಿಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸಿದೆ. ಇದು ಮಾದರಿ ಕಾರ್ಯ ಎಂದು ನೀನಾಸಂ ಸತೀಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಡಿಯೋ ರಿಪೋರ್ಟ್

ನಟ, ರಂಗಕರ್ಮಿ ಏಸುಪ್ರಕಾಶ್, ನಟ ಶ್ರೀಕಾಂತ್, ನೀನಾಸಂ ರಂಗಶಿಕ್ಷಣ ಸಂಸ್ಥೆ ಮಾಜಿ ಪ್ರಾಂಶುಪಾಲರಾದ ಗಣೇಶ್, ಮುತ್ತಲದ ಸ್ವ ಗ್ರಾಮ ಸಮಿತಿ ಅಧ್ಯಕ್ಷ ಗುರುಮೂರ್ತಿ, ಕಾರ್ಯದರ್ಶಿ ಸತೀಶ್ ಹಂಜಾ,  ಸಂಚಾಲಕರ  ರಮೇಶ್,  ವರ್ತೆಕೆರೆ ಅಧ್ಯಕ್ಷ  ಕೃಷ್ಣಪ್ಪ, ಮಾಕೋಡು ಕೆರೆ ಅಧ್ಯಕ್ಷ ಗೋಪಾಲ, ಶಿಕ್ಷಣ ಸಮಿತಿ ಅಧ್ಯಕ್ಷ ಯೋಗೇಂದ್ರ, ಮುತ್ತಲ ಶಾಲೆ ಮುಕ್ಯೋಪಾಧ್ಯಾಯ ಚಂದ್ರಕಲಾ ಶೇಟ್, ಪ್ರಮುಖರಾದ ರೇವಪ್ಪ,  ರಾಜಶೇಖರ್, ಷಣ್ಮುಖ, ಪಾಲಕ್ಷ,  ರೇಣುಕಪ್ಪ,  ಎಂ.ಡಿ.ಮಂಜುನಾಥ್ , ಎಂ.ವೈ.ಮಂಜುನಾಥ್, ಮಲ್ಲೇಶಪ್ಪ,  ಸತೀಶ್,  ಮೋಹನ್, ಚಂದ್ರಕಲಾ ಪ್ರಕಾಶ್, ಲತಾ,   ಶಶಿಕಲಾ, ರೇಣುಕಾ, ಶಾರದಾ, ಲೋಲಾಕ್ಷಿ, ಲಲಿತಾ, ಚಂದ್ರಕಲಾ ಸೇರಿದಂತೆ ಗ್ರಾಮಸ್ಥರು ಈ ಸಂದರ್ಭ ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 24, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment