ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 1 MARCH 2021
ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಹಲ್ಲೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಏನಿದು ಕಿರಿಕ್? ಯಾಕಾಯ್ತು ಗಲಾಟೆ?
ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಎರಡು ದಿನದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಮಲ್ನಾಡ್ ವಾರಿಯಾರ್ಸ್ ಮತ್ತು ಸ್ಟೀಲ್ ಟೈಮ್ ತಂಡಗಳ ನಡುವೆ ರಾತ್ರಿ ಫೈನಲ್ ಪಂದ್ಯಾವಳಿ ನಡೆಯಿತು. ಮಲ್ನಾಡ್ ವಾರಿಯರ್ಸ್ ತಂಡ ಗೆಲುವು ಸಾಧಿಸಿದೆ. ಸಂಭ್ರಮಾಚರಣೆ ನಡೆಯುತ್ತಿದ್ದ ಸಂದರ್ಭ ಘೋಷಣೆ ಕೂಗಲಾಯಿತು. ಈ ವೇಳೆ ವಾಗ್ವಾದ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.
ಜೈ ಶ್ರೀರಾಮ್ ಘೋಷಣೆಗೆ ಹಲ್ಲೆ
ಸ್ಟೀಲ್ ಟೈಮ್ ತಂಡದ ಪರವಾಗಿದ್ದ ಯುವಕನೊಬ್ಬ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ, ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಬರಹಗಳನು ಪ್ರಕಟವಾಗಿದೆ.
ಯಾರ ಮೇಲೆ ಹಲ್ಲೆಯಾಗಿದೆ?
ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್, ಮಂಡಲ ಅಧ್ಯಕ್ಷ ಪ್ರಭಾಕರ್, ಯುವ ಮೋರ್ಚಾ ಕಾರ್ಯಕರ್ತರಾದ ನಕುಲ್, ಧನುಷ್, ಬಜರಂಗದಳ ಕಾರ್ಯಕರ್ತ ಸುನಿಲ್, ಮಹಾಂತೇಶ್ ಅವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಸಕರು ಗರಂ, ಪ್ರತಿಭಟನೆಯ ಎಚ್ಚರಿಕೆ
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಸಕ ಸಂಗಮೇಶ್ವರ್ ಅವರು, ಕಬಡ್ಡಿ ಪಂದ್ಯಾವಳಿ ಜನ ಮೆಚ್ಚುಗೆ ಗಳಿಸಿದೆ. ಇದನ್ನು ಸಹಿಸಿಕೊಳ್ಳಲು ಆಗದೆ ಕೋಮುವಾದಿಗಳು ಅಶಾಂತಿ ಮೂಡಿಸುತ್ತಿದ್ದಾರೆ. ಇವರನ್ನು ಕೂಡಲೆ ಬಂಧಿಸಬೇಕು. ಇಲ್ಲವಾದಲ್ಲಿ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಭದ್ರಾವತಿ ಓಲ್ಡ್ ಟೌನ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






