
ಶಿವಮೊಗ್ಗ ಲೈವ್.ಕಾಂ | SHIMOGA TALUK NEWS | 1 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಉಂಬ್ಳೆಬೈಲು, ಕೊರ್ಲಹಳ್ಳಿ, ಮತ್ತೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕಾಡಾನೆ ಸೇರಿದಂತೆ ಕಾಡು ಪ್ರಾಣಿಗಳ ಉಪಟಳ ತಡೆಯುವಲ್ಲಿ ವಿಫಲವಾದ ಅರಣ್ಯ ಇಲಾಖೆ ವಿರುದ್ಧ ಪ್ರಜಾಸ್ಪಂದನ ಸಾಮಾಜಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ | ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಣಿಸಿದ ಕಾಡಾನೆ, ಲಕ್ಕಿನಕೊಪ್ಪದಲ್ಲಿ ತೋಟಕ್ಕೆ ದಾಳಿ
ಉಂಬ್ಳೆಬೈಲು ವಲಯ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಕಾಡಾನೆ ಸೇರಿದಂತೆ ಕಾಡು ಪ್ರಮಾಣಿಕಗಳ ಉಪಟಳದಿಂದಾಗಿ ಸಮಸ್ಯೆ ಹೆಚ್ಚಾಗಿದೆ. ಇದನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
ಹೋರಾಟಗಾರರ ಬೇಡಿಕೆಗಳೇನು
ಕಾಡಾನೆ ಸೇರಿದಂತೆ ಎಲ್ಲಾ ಬಗೆಯ ಕಾಡು ಪ್ರಾಣಿಗಳಿಂದ ಬೆಳೆಗಳಿಗೆ ರಕ್ಷಣೆ ಒದಗಿಸಬೇಕು. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಂದಕ, ತಡೆಬೇಲಿ ನಿರ್ಮಿಸಬೇಕು. ಕಾಡು ಪ್ರಾಣಿಗಳಿಂದ ಹಾನಿಗೊಳದ ತೋಟದಲ್ಲಿ ಪ್ರತಿ ಅಡಕೆ, ತೆಂಗು ಬೆಳೆಗೆ ಪ್ರತಿ ಸಸಿಗೆ 10 ಸಾವಿರ, ಬಾಳೆ ಅಥವಾ ಇತರೆ ಬೆಳೆಗೆ ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು. ಕಾಡು ಪ್ರಾಣಿಗಳಿಂದ ಜಾನುವಾರುಗಳ ಮೇಲೆ ದಾಳಿ ತಡೆದು ರೈತರಿಗೆ ಅನುಕೂಲ ಮಾಡಿಕೊಡಬೇಕು. ಭದ್ರಾ ಡ್ಯಾಂ ಸಂತ್ರಸ್ಥರಿಗೆ ನೀಡಿದ ಜಮೀನಿನ ಜಂಟಿ ಸರ್ವೆ ಮಾಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದನ್ನೂ ಓದಿ | ಅಪರೇಷನ್ ಮುಗಿದು ವಾರ ಕಳೆಯೋದರಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟಗಳಿಗೆ ದಾಳಿ
ಸಂಘಟನೆ ಅಧ್ಯಕ್ಷ ದುಗ್ಗಪ್ಪಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಉಪಾಧ್ಯಕ್ಷ ಗಂಗಾಧರ್, ಕಾರ್ಯದರ್ಶಿ ಜೆ.ಗಂಗಾರಾಜ್, ಖಜಾಂಚಿ ವಾಸುದೇವ್ ಸೇರಿದಂತೆ ಹಲವರು ಪ್ರತಭಟನೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






