ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 MARCH 2021

ಕಳೆದ ಭಾನುವಾರ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಸಂತೋಷ್ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ?

ಮಾರ್ಚ್ 5ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಐದು ಅಥವಾ ಅದಕ್ಕಿಂತಲೂ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಮಾರಕಾಸ್ತ್ರ ಮತ್ತು ಇತರೆ ಆಯುಧಗಳ ಸಂಗ್ರಹಣೆ, ಸಾಗಣೆಯನ್ನು ನಿಷೇಧಿಸಲಾಗಿದೆ.

ಐದು ಎಫ್‍ಐಆರ್ ದಾಖಲು

ಗಲಾಟೆ ಸಂಬಂಧ ಈತನಕ ಐದು ಎಫ್‍ಐಆರ್‍ಗಳನ್ನು ದಾಖಲು ಮಾಡಲಾಗಿದೆ. ಆದರೆ ಗಲಾಟೆ ಸಂಬಂಧ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತ್ಯೇಕವಾಗಿ ಪ್ರತಿಭಟನೆ, ಮೆರವಣಿಗೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ವರದಿ ಆಧರಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment