ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಮರ ಕಡಿದ ಆರೋಪಿಯೊಬ್ಬನಿಗೆ ಒಂದು ವರ್ಷ ಜೈಲು, ದಂಡ ವಿಧಿಸಲಾಗಿದೆ. ಚೋರಡಿ ಗ್ರಾಮದ ಕರಡಿಬೆಟ್ಟದ ಮನ್ನಾ ಕಾಡಿನಲ್ಲಿ ಮರ ಕಡಿಯಲಾಗಿತ್ತು.
ಈ ಸಂಬಂಧ ಕಮ್ಮನಹಳ್ಳಿ ನಾಗರಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಶಿವಮೊಗ್ಗದ 2ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ, ಆರೋಪಿಗೆ ಒಂದು ವರ್ಷ ಸಾದಾ ಸಜೆ ಮತ್ತು 2 ಸಾವಿರ ರೂ. ದಂಡ ವಿಧಿಸಲಾಗಿದೆ. ಕರ್ನಾಟಕ ಅರಣ್ಯ ನಿಯಮದ ಉಲ್ಲಂಘನೆ ಕಾರಣಕ್ಕೆ ಮೂರು ತಿಂಗಳು ಸಾದಾ ಸಜೆ ಮತ್ತು 500 ರೂ ದಂಡ ವಿಧಿಸಲಾಗಿದೆ. ಅಲ್ಲದೆ ಸರ್ಕಾರಕ್ಕೆ ಪರಿಹಾರವಾಗಿ 10 ಸಾವಿರ ರೂ. ವಿಧಿಸಿ ತೀರ್ಪು ನೀಡಲಾಗಿದೆ.
ಏನಿದು ಕೇಸ್?
ಕರಡಿಬೆಟ್ಟದ ಮನ್ನಾ ಕಾಡಿಗೆ ನಾಗರಾಜ್ ಅಕ್ರಮವಾಗಿ ಪ್ರವೇಶಿಸಿ, ಸಾಗುವಾನಿ ಮರಗಳನ್ನು ಕಡಿದು, 37 ತುಂಡುಗಳಾಗಿ ಕತ್ತರಿಸಲಾಗಿದ್ದ ಎಂಬ ಆರೋಪವಿತ್ತು. ಈ ಸಂಬಂಧ ಆನಂದಪುರ ವಲಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲು ಮಾಡಿಕೊಂಡಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಎಸ್.ಅಂಜಲಿ ಶರ್ಮಾ ಅವರು ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಹೆಚ್.ಕೆ.ಅರುಣ್ ಕುಮಾರ್ ವಾದಿಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200