ದಿಢೀರ್ ನೈಟ್ ರೌಂಡ್ಸ್ ಕೈಗೊಂಡ ಅಧಿಕಾರಿಗಳು, ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ತಟ್ಟಿದ ಬಿಸಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SAGARA NEWS | 20 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವಾಹನಕ್ಕೆ ಕಸ ನೀಡದೆ, ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಿದ್ದವರಿಗೆ ನಗರಸಭೆ ಸಿಬ್ಬಂದಿಗಳು ಬಿಸಿ ಮುಟ್ಟಿಸಿದ್ದಾರೆ. ರಾತ್ರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇನ್ಮುಂದೆ ರಸ್ತೆ ಬದಿಯಲ್ಲಿ ಕಸ ಬಿಸಾಡಿದರೆ ದಂಡ ಹಾಕುವ ಎಚ್ಚರಿಕೆ ನೀಡಿದ್ದಾರೆ.

ಸಾಗರ ನಗರಸಭೆಯ ಪರಿಸರ ಅಭಿಯಂತರರಾದ ಮದನ್ ಅವರ ನೇತೃತ್ವದಲ್ಲಿ ನಗರಸಭೆ ಸಿಬ್ಬಂದಿಗಳು ನೈಟ್ ರೌಂಡ್ಸ್  ಮಾಡಿದರು. ರಾತ್ರಿ ವೇಳೆ ಎಲ್ಲೆಂದರಲ್ಲಿ ಕಸ ಎಸೆಯುವರನ್ನು ಪತ್ತೆ ಹಚ್ಚಿ, ಬುದ್ದಿ ಮಾತು ಹೇಳಿದರು.

ನಗರಸಭೆ ವ್ಯಾಪ್ತಿಯಲ್ಲಿ 31 ವಾರ್ಡ್‍ಗಳಿವೆ. ಇಲ್ಲಿ ಹಲವರು ನಗರಸಭೆಯ ವಾಹನಕ್ಕೆ ಕಸ ಹಾಕುವ ಬದಲು, ರಸ್ತೆ ಬದಿಯಲ್ಲಿ, ಖಾಲಿ ಸೈಟುಗಳಲ್ಲಿ ಎಸೆಯುತ್ತಿದ್ದಾರೆ. ಕಸ ಕೊಳೆತು ದುರ್ನಾಥ ಬೀರುತ್ತಿದೆ. ಅಲ್ಲದೆ ರೋಗಗಳನ್ನು ಹರಡುತ್ತಿದೆ. ಪಟ್ಟಣದ ಸೌಂದರ್ಯವನ್ನೂ ಹಾಳುಗೆಡವುತ್ತಿದೆ. ಇದೆ ಕಾರಣಕ್ಕೆ ಅಧಿಕಾರಿಗಳು ನೈಟ್ ರೌಂಡ್ಸ್ ಮಾಡಿ, ಜನರಲ್ಲಿ ತಿಳಿವಳಿಕೆ ಮೂಡಿಸಿದರು. ಇದು ಮುಂದುವರೆದರೆ ದಂಡ ಹಾಕುವ ಎಚ್ಚರಿಕೆ ನೀಡಿದ್ದರು.

ಸಾಗರ ನಗರಸಭೆ ಅಧಿಕಾರಿಗಳು ಈ ಹಿಂದೆಯೂ ನೈಟ್ ರೌಂಡ್ಸ್ ಮಾಡಿ, ಕಸ ಎಸೆಯುವವರಿಗೆ ಬಿಸಿ ಮುಟ್ಟಿಸಿದ್ದರು. ಆ ಬಳಿಕ ಒಂದಷ್ಟು ಬದಲಾವಣೆ ಗೋಚರಿಸಿತ್ತು.

ಸಿಬ್ಬಂದಿಗಳಾದ ರಾಜು, ರಾಜೇಶ್ ಸೇರಿದಂತೆ ಹಲವರು ನೈಟ್ ರೌಂಡ್ಸ್‍ನಲ್ಲಿ ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment