ಸೈನ್ಸ್ ಮೈದಾನದಲ್ಲಿ ದಕ್ಷಿಣ ಭಾರತದ ಮೊದಲ ಮಹಾ ಪಂಚಾಯತ್, ಹರಿದು ಬಂತು ರೈತ ಸಾಗರ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021

ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್‍ಗೆ ಭಾರತೀಯ ಕಿಸಾನ್ ಯೂನಿಯನ್ ನಾಯಕರು ಚಾಲನೆ ನೀಡಿದರು. ಭತ್ತದ ಕಸೂತಿ ತೋರಣವನ್ನು ಅನಾವರಣಗೊಳಿಸುವ ಮೂಲಕ ಮಹಾ ಪಂಚಾಯತ್ ಉದ್ಘಾಟಿಸಿದರು.

ನವದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಚಳವಳಿಯ ನೇತೃತ್ವ ವಹಿಸಿಕೊಂಡಿರುವ ರಾಕೇಶ್ ಟಿಕಾಯತ್, ಯುದ್ದವೀರ ಸಿಂಗ್ ಮತ್ತು ಡಾ. ದರ್ಶನ್ ಪಾಲ್  ಅವರು ಮಹಾ ಪಂಚಾಯತ್‍ನಲ್ಲಿ ಭಾಗವಹಿಸಿದ್ದರು.

ಬಡವರ ರೊಟ್ಟಿ ತಿಜೋರಿಗೆ

ಸಮಾವೇಶದಲ್ಲಿ  ಮಾತನಾಡಿದ ರಾಕೇಶ್ ಟಿಕಾಯತ್ ಅವರು, ಬಡವರ ರೊಟ್ಟಿಯನ್ನು ತಿಜೋರಿಯಲ್ಲಿ ಲಾಕ್ ಮಾಡಿ ಇಡಲು ಬಂಡವಾಳಶಾಹಿಗಳು ಯೋಜಿಸುತ್ತಿದ್ದಾರೆ. ಅದಕ್ಕಾಗಿಯೇ ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿದ್ದಾರೆ. ಹಾಗಾಗಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಹೋರಾಟದ ಮಾದರಿಯಲ್ಲಿ ದೇಶಾದ್ಯಂತ ಹೋರಾಟ ಮಾಡಬೇಕು. ಕರ್ನಾಟಕದ ರೈತರು ಬೆಂಗಳೂರನ್ನೆ ದೆಹಲಿ ಮಾಡಿಕೊಳ್ಳಬೇಕು. ಬೆಂಗಳೂರಿನ ಗಡಿಯನ್ನು ಬಂದ್ ಮಾಡಿ ಹೋರಾಟ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು. ಈ ಹೋರಾಟದಲ್ಲಿ ಯುವ ಸಮುದಾಯ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ದಕ್ಷಿಣ ರೈತರು ಏನು ಮಾಡುತ್ತಿದ್ದಾರೆ?

ಡಾ. ದರ್ಶನ್ ಪಾಲ್ ಮಾತನಾಡಿ, ಉತ್ತರ ಭಾರತದಲ್ಲಿ ಹೋರಾಟ ನಡೆಸುತ್ತಿರುವ ರೈತರು, ದಕ್ಷಿಣ ಭಾರತದ ರೈತರು ನಮ್ಮ ಬೆಂಬಲಕ್ಕಿದ್ದಾರೆಯೇ ಎಂದು ಯೋಚಿಸುತ್ತಿದ್ದರು. ಮಹಾ ಪಂಚಾಯತ್ ಮೂಲಕ ನಿಮ್ಮ ಬೆಂಬಲವನ್ನು ಸೂಚಿಸಿದ್ದೀರ. ಸ್ವಾತಂತ್ರ್ಯ ನಂತರ ಇದು ರೈತರ ದೊಡ್ಡ ಚಳವಳಿಯಾಗಿದೆ. ದೆಹಲಿಯ ಹೋರಾಟದ ಕಿಚ್ಚು ದೇಶಾದ್ಯಂತ ವ್ಯಾಪಿಸಿದೆ. ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯದೆ ಇದ್ದರೆ ರೈತರ ಆಕ್ರೋಶದ ಜ್ವಾಲೆಯಲ್ಲಿ ಮೋದಿ ಸರ್ಕಾರ ಸುಟ್ಟು ಹೋಗಲಿದೆ ಎಂದರು.

ವಿವಿಧ ಜಿಲ್ಲೆಯಿಂದ ರೈತರು

ಮಹಾ ಪಂಚಾಯತ್‍ನಲ್ಲಿ ಭಾಗವಹಿಸಲು ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ರೈತರು ಆಗಮಿಸಿದ್ದರು. ಬಂದಿದ್ದ ರೈತರಿಗೆ ಪ್ರತಿಯೊಬ್ಬರಿಗೂ ನೀರಿನ ಬಾಟಲಿಯ ವ್ಯವಸ್ಥೆ ಮಾಡಲಾಗಿತ್ತು. ಮಜ್ಜಿಗೆ, ಹಣ್ಣು ಮತ್ತು ಮಂಡಕ್ಕಿ ಪೂರೈಸಾಯಿತು.

ಶೋಭಾ ಸುಂದರೇಶ್ ಅಧ್ಯಕ್ಷತೆ ವಹಿಸಿದ್ದರು. ರೈತ ಮುಖಂಡರಾದ ಕೆ.ಟಿ.ಗಂಗಾಧರ್, ಹೆಚ್.ಆರ್.ಬಸವರಾಜಪ್ಪ, ಚುಕ್ಕಿ ನಂಜುಂಡಸ್ವಾಮಿ, ವಿವಿಧ ಪಕ್ಷಗಳು ಮತ್ತು ಸಂಘಟನೆಗಳ ಪ್ರಮುಖರು ಮಹಾ ಪಂಚಾಯತ್‍ನಲ್ಲಿ ಭಾಗವಹಿಸಿದ್ದರು.

161119384 1350492001978883 4694642853042532050 n.jpg? nc cat=111&ccb=1 3& nc sid=8bfeb9& nc ohc=c9E3gkbXj4YAX RyQQ& nc ht=scontent.fblr4 2

161655065 1350492048645545 7254786757795059833 n.jpg? nc cat=107&ccb=1 3& nc sid=8bfeb9& nc ohc=oiofK 7JGf8AX DGQjA& nc ht=scontent.fblr4 2

161000076 1350492081978875 7522545558301183464 n.jpg? nc cat=101&ccb=1 3& nc sid=8bfeb9& nc ohc=Fk 3A F23zMAX m139k& nc ht=scontent.fblr4 1

160878520 1350492128645537 5225699105272001527 n.jpg? nc cat=102&ccb=1 3& nc sid=8bfeb9& nc ohc=Qdgz8zghcsgAX8rJZvA& nc ht=scontent.fblr4 1

160220798 1350492158645534 6200792565633140942 n.jpg? nc cat=105&ccb=1 3& nc sid=8bfeb9& nc ohc=kxhc0OoTBm4AX9 rGLx& nc ht=scontent.fblr4 2

161233808 1350492211978862 6928972539743097815 n.jpg? nc cat=104&ccb=1 3& nc sid=8bfeb9& nc ohc=zpx15coWkmgAX9f51n1& nc ht=scontent.fblr4 3

161300372 1350492261978857 519653990137466601 n.jpg? nc cat=108&ccb=1 3& nc sid=8bfeb9& nc ohc=owyqOK2N5a0AX8kj349& nc ht=scontent.fblr4 3

160569361 1350492295312187 601465180455302172 n.jpg? nc cat=108&ccb=1 3& nc sid=8bfeb9& nc ohc=FEHbJIQSssUAX aB4mP& nc ht=scontent.fblr4 3

160082126 1350492371978846 6486699265036714784 n.jpg? nc cat=100&ccb=1 3& nc sid=8bfeb9& nc ohc=pXHlQvJtkN8AX t2h M& nc ht=scontent.fblr4 3

162412221 1350492411978842 1174270776304187873 n.jpg? nc cat=108&ccb=1 3& nc sid=8bfeb9& nc ohc=gHKIBJHtz8QAX 20lUh& nc ht=scontent.fblr4 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment