| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 MARCH 2021
ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತನೊಬ್ಬ, ಸಾಗರ ತಾಲೂಕಿನ ವ್ಯಕ್ತಿಯೊಬ್ಬರಿಗೆ 1.65 ಲಕ್ಷ ರೂ. ವಂಚನೆ ಮಾಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಮೌಸ್ ಬುಕ್ ಮಾಡಲು ಹೋಗಿ 65 ಸಾವಿರ ಕಳೆದುಕೊಂಡ ಶಿವಮೊಗ್ಗದ ಬ್ಯಾಂಕ್ ಉದ್ಯೋಗಿ
ಸಾಗರ ತಾಲೂಕಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತ, ತನ್ನನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮ್ಮ ಖಾತೆಯಲ್ಲಿ ಎರಡು ಲಕ್ಷಕ್ಕಿಂತಲೂ ಹೆಚ್ಚಿಗೆ ಹಣವಿದೆ. 80 ಸಾವಿರ ರುಪಾಯಿಯನ್ನು ಡೆಪಾಸಿಟ್ ಮಾಡಿಕೊಳ್ಳುತ್ತೇವೆ. ಹತ್ತು ವರ್ಷದ ಬಳಿಕ ನಿಮಗೆ 1.40 ಲಕ್ಷ ರೂ. ಸಿಗಲಿದೆ ಎಂದು ತಿಳಿಸಿದ. ಆದರೆ ಸಾಗರದ ವ್ಯಕ್ತಿ ಇದಕ್ಕೆ ಒಪ್ಪದಿದ್ದಾಗ ಅಪರಿಚಿತ ವರಸೆ ಬದಲಿಸಿದ್ದ.
ವಂಚನೆಯ ಹೊಸ ಪ್ಲಾನ್ ರೆಡಿ
80 ಸಾವಿರ ರೂ. ಡೆಪಾಸಿಟ್ ಮಾಡಿಕೊಳ್ಳುವ ವಿಚಾರ ಕೈಬಿಟ್ಟ ವಂಚಕ, ಪ್ಲಾನ್ ಕ್ಯಾನ್ಸಲ್ ಮಾಡ್ತೀವಿ. ಅದಕ್ಕಾಗಿ ನಿಮ್ಮ ಮೊಬೈಲ್ಗೆ ಬಂದಿರುವ ಒಟಿಪಿ ಕಳುಹಿಸಿ ಎಂದು ತಿಳಿಸಿದ್ದಾನೆ. ಸಾಗರದ ವ್ಯಕ್ತಿ ಒಟಿಪಿ ಕಳುಹಿಸಿದ್ದಾರೆ. ಮರುದಿನ ಮತ್ತೆ ಕರೆ ಮಾಡಿದ ವಂಚಕ, ಮ್ಯಾನೇಜರ್ ಸೋಗಿನಲ್ಲಿ ಮಾತನಾಡಿದ, ಪುನಃ ಒಟಿಪಿ ಕೇಳಿದ್ದಾನೆ. ಸಾಗರದ ವ್ಯಕ್ತಿ ಒಟಿಪಿ ಒದಗಿಸಿದ್ದಾರೆ.
ಎಳು ಭಾರಿ ಒಟಿಪಿ ಪಡೆದ
ಡೂಪ್ಲಿಕೇಟ್ ಮ್ಯಾನೇಜರ್ ಒಟ್ಟು ಏಳು ಭಾರಿ ಒಟಿಪಿ ಪಡೆದುಕೊಂಡಿದ್ದಾನೆ. ಈ ಅವಧಿಯಲ್ಲಿ ಸುಮಾರು 1.65 ಲಕ್ಷ ರೂ. ಹಣವನ್ನು ಸಾಗರದ ವ್ಯಕ್ತಿಯ ಅಕೌಂಟ್ನಿಂದ ವರ್ಗಾವಣೆ ಮಾಡಿಕೊಂಡಿದ್ದಾನೆ. ಅನುಮಾನದ ಮೇರೆಗೆ ಸಾಗರದ ವ್ಯಕ್ತಿಯು ತಮ್ಮ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡಿದಾಗ ವಂಚನೆಗೊಳಗಾಗಿರುವುದು ತಿಳಿದು ಬಂದಿದೆ. ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್ಚರ, ಕಟ್ಟೆಚ್ಚರ
ಬ್ಯಾಂಕ್ ಮ್ಯಾನೇಜರ್, ಬ್ಯಾಂಕ್ ಸಿಬ್ಬಂದಿ ಹೀಗೆ, ಹಲವು ಸೋಗಿನಲ್ಲಿ ವಂಚಕರು ಕರೆ ಮಾಡಿ, ಒಟಿಪಿ ಪಡೆದುಕೊಳ್ಳುತ್ತಾರೆ. ಯಾವುದೆ ಕಾರಣಕ್ಕೂ ಜನರು ಒಟಿಪಿ ಒದಗಿಸಬಾರದು ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಬ್ಯಾಂಕ್ನ ಶಾಖೆಗೆ ತೆರಳಿ ನೇರವಾಗಿಯೇ ಬಗೆಹರಿಸಿಕೊಂಡರೆ ವಂಚಕರ ಬಲೆಗೆ ಬೀಳುವುದು ತಪ್ಪಲಿದೆ.
ಇದನ್ನೂ ಓದಿ | ಕೌನ್ ಬನೇಗಾ ಕರೋಡ್ಪತಿ ಹೆಸರಲ್ಲಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚನೆ, ವಂಚಿಸಿದ್ದು ಹೇಗೆ?
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()