ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021
ಔಷಧ ಇಲ್ಲ ಎಂದು ಹೇಳಿದ್ದಕ್ಕೆ ಮೆಡಿಕಲ್ ಶಾಪ್ ಮಾಲೀಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಸ್ಥಳೀಯರೆ ಅತನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಾಗರ ತಾಲೂಕು ಕಾರ್ಗಲ್ ಮುಖ್ಯ ಪಟ್ಟಣ ಬೀದಿಯಲ್ಲಿನ ಲಕ್ಷ್ಮೀ ಮೆಡಿಕಲ್ ಶಾಪ್ ಮಾಲೀಕ ರಾಹುಲ್ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಮಾಡಿದ ತೇಜಸ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮೆಡಿಕಲ್ ಶಾಪ್ಗೆ ಬಂದ ತೇಜಸ್ ಕೆಲವು ಔಷಧಗಳನ್ನು ಖರೀದಿಸಲು ಕೇಳಿದ್ದಾನೆ. ಈ ಔಷಧಗಳು ಇಲ್ಲ ಎಂದು ರಾಹುಲ್ ತಿಳಿಸಿದ್ದಾರೆ. ಇದರಿಂದ ಕುಪಿತನಾದ ತೇಜಸ್, ರಾಹುಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಂಗಡಿಯಲ್ಲಿದ್ದ ಔಷಧಗಳು ಚಲ್ಲಾಪಿಲ್ಲಿ ಮಾಡಲಾಗಿದೆ. ಗಾಜು ಒಡೆಯಲಾಗಿದ್ದು, ಸ್ಥಳೀಯರು ಜಗಳ ಬಿಡಿಸಿದ್ದಾರೆ ಎಂದು ತಿಳಿದು ಬಂದಿದೆ. ತೇಜಸ್ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















