ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021
ವಸತಿ ಫಲಾನುಭವಿಗಳ ಆಯ್ಕೆಯ ಜವಾಬ್ದಾರಿಯನ್ನು ಶಾಸಕರಿಗೆ ನೀಡಿರು ಕ್ರಮಕ್ಕೆ ಹೊಸನಗರ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಹೊಸನಗರ ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ತಾಲೂಕು ಕಾಂಗ್ರೆಸ್ ಘಟಕ, ಗ್ರಾಮ ಸಭೆಗಳಲ್ಲಿ ವಸತಿ ಫಲಾನುಭವಿಗಳ ಆಯ್ಕೆ ನಡೆಯುತ್ತಿತ್ತು. ಈಗ ಆ ಹೊಣೆಯನ್ನು ಶಾಸಕರಿಗೆ ವಹಿಸಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ವಿಕೇಂದ್ರಿಕರಣ ನೀತಿಗೆ ವಿರುದ್ಧ
ಈ ವೇಳೆ ಮಾತನಾಡಿದ ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಈವರೆಗೂ ದೇಶದಲ್ಲೇ ನಮ್ಮ ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆ ಮಾದರಿಯನಿಸಿಕೊಂಡಿತ್ತು. ಆದರೆ ಶಾಸಕರು, ಸಚಿವರು ಮೂಗು ತೂರಿಸಲು ಆರಂಭಿ
ಫಲಾನುಭವಿಗಳ ಆಯ್ಕೆಯ ಜವಾಬ್ದಾರಿಯನ್ನು ಶಾಸಕರಿಗೆ ವಹಿಸಿರುವುದು ಪಂಚಾಯತ್ ರಾಜ್ ಕಾಯ್ದೆಯ ವಿರುದ್ಧವಾಗಲಿದೆ ಎಂದು ಆರೋಪಿಸಿದರು.
ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ಸದಾಶಿವ ಶೆಟ್ಟಿ, ಸೂಚಕ ರಫೀಕ್, ತಾಲೂಕು ಪಂಚಾಯತ್ ಸದಸ್ಯರಾದ ಏರಿಗೆ ಉಮೇಶ್, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200