ರಸಗೊಬ್ಬರಕ್ಕೆ ಹೆಚ್ಚಿನ ದರ ವಿಧಿಸಿದರೆ ಮಾರಾಟಗಾರರ ವಿರುದ್ಧ ಕೇಸ್, ಪರವಾನಗಿ ರದ್ದು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 APRIL 2021

ರಸಗೊಬ್ಬರ ಮಾರಾಟಗಾರರು ನಿಗದಿಗಿಂತಲೂ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ರೈತರು ದೂರು ನೀಡಬಹುದು ಎಂದು ಶಿವಮೊಗ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ರೈತರ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಕೆಯ ಕಚೇರಿಯಲ್ಲಿ ದೂರು ದಾಖಲಿಸಬಹುದಾಗಿದೆ.

2021ರ ಏಪ್ರಿಲ್ 01 ರಿಂದ ರಸಗೊಬ್ಬರ ಧಾರಣೆ ಏರಿಕೆಯಾಗಿದೆ ಎಂಬ ನೆಪವೊಡ್ಡಿ, ಲಭ್ಯವಿರುವ ದಾಸ್ತಾನಿನ ರಸಗೊಬ್ಬರ ಚೀಲಗಳ ಮೇಲೆ ಮುದ್ರಿತವಾಗಿರುವ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ. ಈ ರೀತಿ ಮಾರಾಟ ಮಾಡಿದರೆ ರಸಗೊಬ್ಬರ ನಿಯಂತ್ರಣ ಆದೇಶ 1985ರ ಅನ್ವಯ ಕಾನೂನು ರೀತಿ ವಂಚನೆಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ದಲ್ಲಿ, ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

169156601 1095982247548351 4823304453913451213 n.jpg? nc cat=109&ccb=1 3& nc sid=8bfeb9& nc ohc=lzqbq8nu4bMAX8m5ozk& nc ht=scontent.fblr20 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment