ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಹೊಳೆಯಲ್ಲಿ ಮುಳುಗಿದ್ದ ಯುವಕ ಸಾವು, ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

169156601 1095982247548351 4823304453913451213 n.jpg? nc cat=109&ccb=1 3& nc sid=8bfeb9& nc ohc=lzqbq8nu4bMAX8m5ozk& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021

ಹೊಳೆಯಲ್ಲಿ ಸ್ನಾನಕ್ಕೆ ಹೋಗಿ ಕಣ್ಮರೆಯಾಗಿದ್ದ ಯುವಕ ಶವವಾಗಿ ಪತ್ತೆಯಗಿದ್ದಾನೆ. ಯುವಕ ಮುಳುಗಿದ್ದಾನೆ ಎನ್ನಲಾದ ಸ್ಥಳದಿಂದ ಸನಿಹದಲ್ಲೆ ಮೃತದೇಹ ಪತ್ತೆಯಾಗಿದೆ.

ಹೊಳೆಭೈರನಹಳ್ಳಿ ಗ್ರಾಮದ ಅರುಣ್ (15) ಮೃತನು. ಸೋಮವಾರ ತನ್ನ ಸ್ನೇಹಿತರೊಂದಿಗೆ ಅರುಣ್ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಎಂದು ತಿಳಿದು ಬಂದಿದೆ. ಈತ ಈಜಲು ಬಾರದೆ ಹೊಳೆಯಲ್ಲಿ ಮುಳುಗಿರುವ ಶಂಕೆ ಇದೆ.

ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಇವತ್ತು ಮಧ್ಯಾಹ್ನ ಮೃತದೇಹ ಪತ್ತೆಯಗಿದೆ. ಈತ ಹೊಳೆಭೈರನಹಳ್ಳಿ ನಿವಾಸಿಗಳಾದ ಅಣ್ಣಪ್ಪ, ಗಂಗಮ್ಮ ದಂಪತಿಯ ಪುತ್ರ.

ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment