ಶಿವಮೊಗ್ಗ KSRTC ವಿಭಾಗಕ್ಕೆ ಕೋಟಿ ಕೋಟಿ ಆದಾಯ ಖೋತಾ, ಖಾಸಗಿ ಟ್ರಾವೆಲ್ಸ್​​ಗೆ ಬಂಪರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

169156601 1095982247548351 4823304453913451213 n.jpg? nc cat=109&ccb=1 3& nc sid=8bfeb9& nc ohc=lzqbq8nu4bMAX8m5ozk& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021

ಸಾರಿಗೆ ನೌಕರರ ಮುಷ್ಕರದಿಂದಾಗಿ ಕೆಎಸ್‍ಆರ್‍ಟಿಸಿಯ ಶಿವಮೊಗ್ಗ ವಿಭಾಗಕ್ಕೆ ಕೋಟಿ ಕೋಟಿ ರೂ. ಆದಾಯ ಖೋತಾ ಆಗಿದೆ. ಯುಗಾದಿ ಹಬ್ಬ, ಸಾಲು ಸಾಲು ರಜೆಯಿಂದ ಕೆಎಸ್‍ಆರ್‍ಟಿಸಿಗೆ ದೊಡ್ಡ ಮಟ್ಟದ ಆದಾಯ ಬರುತ್ತಿತ್ತು. ಆದರೆ ಮುಷ್ಕರದಿಂದಾಗಿ ಇದಕ್ಕೆ ಬ್ರೇಕ್ ಬಿದ್ದಿದೆ.

ಕಳೆದ ಎಂಟು ದಿನದಿಂದ ನಡೆಯುತ್ತಿರುವ ಮುಷ್ಕರದಿಂದಾಗಿ ಶಿವಮೊಗ್ಗ ವಿಭಾಗಕ್ಕೆ ಮೂರು ಕೋಟಿ ರೂ. ಆದಾಯ ಖೋತಾ ಆಗಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಮಂಗಳೂರು ಕಡೆಗೆ ಹೆಚ್ಚಿನ ಬಸ್‍ಗಳು ಸಂಚರಿಸುತ್ತಿದ್ದವು. ಆದರೆ ಇವೆಲ್ಲ ಬಸ್ಸುಗಳನ್ನು ನಿಲ್ಲಿಸಿರುವುದರಿಂದ ಆದಾಯಕ್ಕೆ ತೊಡಕಾಗಿದೆ.

ಎರಡೆ ದಿನಕ್ಕೆ ಹತ್ತು ಲಕ್ಷ ಲಾಸ್‍

ಯುಗಾದಿ ಹಬ್ಬದ ಹಿನ್ನೆಲೆ ವಿವಿಧ ಜಿಲ್ಲೆಯಿಂದ ಜನರು ಶಿವಮೊಗ್ಗಕ್ಕೆ ಬಂದು ಹೋಗುತ್ತಾರೆ. ಬೆಂಗಳೂರಿನಿಂದಲೇ ಅತಿ ಹೆಚ್ಚು ಪ್ರಯಾಣಿಕರು ಬರುತ್ತಾರೆ. ಮುಷ್ಕರದಿಂದಾಗಿ ಜನರು ಖಾಸಗಿ ಟ್ರಾವಲ್ಸ್ ಮತ್ತು ರೈಲನ್ನು ಅವಲಂಬಿಸಿದ್ದರು. ಇದರಿಂದ ಶಿವಮೊಗ್ಗ ವಿಭಾಗದ ಕೆಎಸ್‍ಆರ್‍ಟಿಸಿಗೆ ಅಂದಾಜು ಹತ್ತು ಲಕ್ಷ ರೂ. ಖೋತಾ ಆಗಿರಬಹುದಾಗಿದೆ.

ಗೊಂದಲದ ನಡುವೆ, ಖಾಸಗಿಯವರಿಗೆ ಬಂಪರ್

ಖಾಸಗಿ ಟ್ರಾವಲ್ಸ್‍ಗಳು ಯುಗಾದಿ ಹಬ್ಬದ ರಜೆಯ ಲಾಭ ಪಡೆದುಕೊಂಡಿವೆ. ಬುಧವಾರ ರಾತ್ರಿ ಹೆಚ್ಚಿನ ಸಂಖ್ಯೆಯ ಖಾಸಗಿ ಬಸ್‍ಗಳು ರಸ್ತೆಗಿಳಿದಿದ್ದವು. ಈ ಪೈಕಿ ಬಹುಪಾಲು ಬಸ್ಸುಗಳು ಬೆಂಗಳೂರಿಗೆ ಸಂಚರಿಸಿದವು. ಕೆಎಸ್‍ಆರ್‍ಟಿಸಿ ನಿಲ್ದಾಣದಿಂದಲೇ ಖಾಸಗಿ ಬಸ್‍ಗಳು ಸಂಚಾರ ಆರಂಭಿಸಿದವು.

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 15, 2021

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment