ಶಿವಮೊಗ್ಗದಲ್ಲಿ ರಂಜಾನ್ ಪ್ರಾರ್ಥನೆಗೆ ಕೋವಿಡ್ ಮಾರ್ಗಸೂಚಿ, ಏನೆಲ್ಲ ಪಾಲಿಸಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021

ಕೋವಿಡ್ ಹಿನ್ನೆಲೆ ರಂಜಾನ್ ಆಚರಣೆ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.

ಏನೆಲ್ಲ ನಿಯಮಗಳು?

ಕಂಟೈನ್‍ಮೆಂಟ್ ವಲಯದಲ್ಲಿ ಬರುವ ಮಸೀದಿ ಹಾಗೂ ಇತರ ಪ್ರಾರ್ಥನಾ ಮಂದಿರಗಳನ್ನು ಸಾರ್ವಜನಿಕರಿಗೆ ತೆರೆಯಬಾರದು.

60 ವರ್ಷ ಮೇಲ್ಪಟ್ಟವರು, ತೀವ್ರ ಕಾಯಿಲೆಯಿಂದ ಬಳಲುತ್ತಿರುವವರು, ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿರಬೇಕು.

Covid 19 Vaccination Kan poster 1 1

ಗುಂಪು ಸೇರಬಾರದು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತಕ ಕಾಯ್ದುಕೊಳ್ಳಲು ಮಸೀದಿಯಲ್ಲಿ ಬಣ್ಣದಿಂದ ಗುರುತು ಮಾಡಬೇಕು.

ಅಗತ್ಯವಿದ್ದರೆ ಪಾಳಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಆಜಾನ್ ಆರಂಭದ 5 ನಿಮಿಷ ಮೊದಲು ಮಸೀದಿಯನ್ನು ತೆರೆಯಬೇಕು ಮತ್ತು ಕಡ್ಡಾಯ ನಮಾಝ್ ಮುಗಿದ ತಕ್ಷಣ ಮಸೀದಿಯನ್ನು ಮುಚ್ಚಬೇಕು.

ಪ್ರಾರ್ಥನೆಗೆ ಅಗತ್ಯವಿರುವ ಮ್ಯಾಟ್, ಟೊಪ್ಪಿ ಇತ್ಯಾದಿಗಳನ್ನು ಮನೆಯಿಂದಲೇ ತರಬೇಕು.

ಇಫ್ತಾರ್ ಕೂಟವನ್ನು ಮಸೀದಿಯಲ್ಲಿ ಆಯೋಜಿಸದೆ ಮನೆಯಲ್ಲಿಯೇ ಉಪವಾಸ ತೊರೆದು ಕೇವಲ ಪ್ರಾರ್ಥನೆಗಾಗಿ ಮಾತ್ರ ಮಸೀದಿಗೆ ಬರಬೇಕು.

ಪ್ರತಿ ಪ್ರಾರ್ಥನೆ ಬಳಿಕ ಮಸೀದಿಯನ್ನು ಸ್ವಚ್ಛಗೊಳಿಸಿ ಡಿಸ್ ಇನ್‍ಫೆಕ್ಷನ್ ಮಾಡಬೇಕು.

ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಮಸೀದಿಯಲ್ಲಿ ಫಲಕಗಳನ್ನು ಅಳವಡಿಸಬೇಕು. ಪ್ರತಿ ಮಸೀದಿಯಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಯನ್ನು ಖಾತ್ರಿಪಡಿಸಲು ಪಾಲನಾ ಸಮಿತಿಗಳನ್ನು ರಚಿಸಬೇಕು ಮತ್ತು ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಹೇಳಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 16, 2021

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment