ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | RIPPONPETE NEWS | 20 APRIL 2021
ರಿಪ್ಪನ್ಪೇಟೆ ಸುತ್ತಮುತ್ತ ಇವತ್ತು ಆಲಿಕಲ್ಲು ಮಳೆಯಾಗಿದೆ. ಜೋರು ಮಳೆ ಮತ್ತು ಗಾಳಿಯ ರಭಸಕ್ಕೆ ವಿವಿಧೆಡೆ ಮನೆ ಮತ್ತು ವಾಹನಗಳಿಗೆ ಹಾನಿಯಾಗಿದೆ.

ಇಲ್ಲಿನ ಸಾಗರ ರಸ್ತೆಯ ಪದವಿ ಪೂರ್ವ ಕಾಲೇಜು ಸಮೀಪ ಮರ ಬುಡಮೇಲಾಗಿದೆ. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದೆ. ಇದರಿಂದ ತೀರ್ಥಹಳ್ಳಿ – ಸಾಗರ ಹೆದ್ದಾರಿ ತಾತ್ಕಾಲಿಕವಾಗಿ ಬಂದ್ ಆಗಿದೆ.
ಮರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಅಲ್ಲಿಯವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮರ ಉರುಳಿ ಬಿದ್ದಿರುವುದರಿಂದ ಕಾರು, ಗೂಡ್ಸ್ ಆಟೋ, ಬೈಕ್ ಮತ್ತು ಕೆಲವು ಕಟ್ಟಡಗಳಿಗೆ ಹಾನಿಯಾಗಿದೆ.
ಗಾಳಿ, ಮಳೆಯಿಂದಾಗಿ ರಿಪ್ಪನ್ಪೇಟೆ ಸುತ್ತಮುತ್ತ ಹಲವು ಮನೆಗಳಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.
ಅತ್ತ ಆನಂದಪುರ ಸಮೀಪದ ಗೌತಮಪುರದಲ್ಲಿ ಸಿಡಲು ಬಡಿದು ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿದೆ. ಸ್ಥಳೀಯರು ಇದನ್ನು ಗಮನಿಸಿ ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ವಿಡಿಯೋ ವರದಿ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






