ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಬೆಂಗಳೂರು : ವ್ಯಾಪಕವಾಗಿ ಹರಡುತ್ತಿರುವ ಕರೋನ ಸೋಂಕು ತಡೆಯಲು ಮತ್ತೊಮ್ಮೆ ಬಿಗಿ ಕ್ರಮ ಕೈಗೊಂಡಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. 14 ದಿನ ಬಿಗಿ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನ ಕೈಗೊಂಡಿದೆ
ಸಭೆ ಬಳಿಕ ಸಿಎಂ ಹೇಳಿದ್ದೇನು?
ಸಚಿವ ಸಂಪುಟ ಸದಸ್ಯರು, ತಜ್ಱರ ಜೊತೆ ಸಭೆಯನ್ನು ನಡೆಸಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ 18 -45 ವರ್ಷದವರಿಗೆ ವ್ಯಾಕ್ಸಿನ್ ಉಚಿತವಾಗಿ ಕೊಡುತ್ತೇವೆ. ಈ ಬಗ್ಗೆ ಆರೋಗ್ಯ ಇಲಾಖೆ ರೂಪುರೇಷೆ ಸಿದ್ಧಪಡಿಸುತ್ತದೆ. 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರದಲ್ಲಿ
ನಾಳೆ (27 ಏಪ್ರಿಲ್) ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಯಲ್ಲಿರುತ್ತೆ. ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.
ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
10 ಗಂಟೆ ಬಳಿಕ ಎಲ್ಲ ಅಂಗಡಿಗಳು ಬಾಗಿಲು ಹಾಕಬೇಕು.
ಉತ್ಪಾದನಾ ಕ್ಷೇತ್ರ , ಕೃಷಿ ಕ್ಷೇತ್ರಕ್ಕೆ ಯಾವುದೆ ತೊಂದರೆ ಇಲ್ಲ. ಎಮರ್ಜನ್ಸಿ, ಮೆಡಿಕಲ್ ಕ್ಷೇತ್ರ ಮುಂದುವರೆಯಲಿದೆ.
ಎರಡು ವಾರದಲ್ಲಿ ಕರೋನ ಕಂಟ್ರೋಲ್ಗೆ ಬಾರದೆ ಇದ್ದರೆ, ಬಿಗಿ ಕ್ರಮ ಮುಂದುವರೆಯಲಿದೆ.
ಕೆಎಸ್ಆರ್ಟಿಸಿ ಬಸ್ ಸಂಚಾರ ಇರುವುದಿಲ್ಲ. ಗೂಡ್ಸ್ ಸಾಗಣೆ ಮಾಡಲು ಯಾವುದೆ ಅಡ್ಡಿಯಿಲ್ಲ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






