ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021
ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ಖಾಕಿ ಭದ್ರಕೋಟೆಯಾಗಿದೆ. ನಾಲ್ಕು ದಿಕ್ಕಿಗೂ ಬ್ಯಾರಿಕೇಡ್ ಹಾಕಲಾಗಿದೆ. ಯಾವುದೆ ವಾಹನಗಳು ಈ ಸರ್ಕಲ್ನಲ್ಲಿ ಹಾದು ಹೋಗಲು ಅವಕಾಶವಿಲ್ಲ.
ಕರ್ಫ್ಯೂ ಇದ್ದರೂ ಅನಗತ್ಯ ಓಡಾಡುವವರಿಗೆ ಕಡಿವಾಣ ಹಾಕಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಿ.ಹೆಚ್.ರಸ್ತೆ, ನೆಹರೂ ರೋಡ್, ಓ.ಟಿ.ರಸ್ತೆ ಕಡೆಯಿಂದ ಓಡುವವರು ಈ ಸರ್ಕಲ್ ಮೂಲಕವೆ ಸಂಚರಿಸಬೇಕಾಗುತ್ತದೆ.
ಬ್ಯಾರಿಕೇಡ್ ಹಾಕಿರುವುದರಿಂದ ಅಮೀರ್ ಅಹಮದ್ ಸರ್ಕಲ್ ಕಡೆಯಿಂದ ಸಂಚರಿಸಲು ಯಾರಿಗೂ ಅವಕಾಶವಿಲ್ಲ. ಸೈನ್ಸ್ ಮೈದಾನದ ಕಡೆಯಿಂದ ಬರುವವರು ಬಸ್ ನಿಲ್ದಾಣದ ಕಡೆಯಿಂದ ನೇರವಾಗಿ ಸಂಚರಿಸಲು ಅವಕಾಶವಿಲ್ಲ. ವೀರಭದ್ರ ಟಾಕೀಸ್ , ಡಿವಿಎಸ್ ಸರ್ಕಲ್, ಗೋಪಿ ಸರ್ಕಲ್ ಮೂಲಕ ಸುತ್ತಿ ಬಳಸಿ ಸಂಚರಿಸಬೇಕು.
ತುರ್ತು ಸೇವೆಗಳಾದ ಆಂಬುಲೆನ್ಸ್, ಪೊಲೀಸ್, ಅಗ್ನಿಶಾಮಕ ವಾಹನಗಳಿಗೆ ಮಾತ್ರ ಸರ್ಕಲ್ ಮೂಲಕ ಹಾದು ಹೋಗಲು ಅವಕಾಶವಿದೆ. ಸುತ್ತಿ ಬಳಸಿ ಓಡಾಡುವುದರಿಂದ ತುರ್ತು ಅಗತ್ಯವಿದ್ದವರಷ್ಟೆ ರಸ್ತೆಗಿಳಿಯುತ್ತಾರೆ. ಅಲ್ಲದೆ ಪ್ರತಿ ಸರ್ಕಲ್, ರಸ್ತೆಯಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿರುವುದರಿಂದ ಅನಗತ್ಯ ಸುತ್ತಾಡುವವರಿಗೆ ಬ್ರೇಕ್ ಬೀಳಲಿದೆ ಅನ್ನುವುದು ಪೊಲೀಸರ ಲೆಕ್ಕಾಚಾರ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















