ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಕರೋನ ತಪಾಸಣೆಗೆ ಸೋಂಕಿತರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಇದರ ವಿರುದ್ಧ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ ಅವರು ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದಾರೆ.

ಶಾಸಕ ಆರಗ ಜ್ಞಾನೇಂದ್ರ ಅವರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೊಪ್ಪುಗುಡ್ಡೆ ರಾಘವೇಂದ್ರ, ರೋಗ ಲಕ್ಷಣಗಳಿರುವ ಕುರಿತು ಪರೀಕ್ಷೆಗೆ ಹಲವರು ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗೆ ತೆರಳುತ್ತಾರೆ. ಇಲ್ಲಿ ದುಬಾರಿ ದರ ವಿಧಿಸಲಾಗುತ್ತಿದೆ. ಇದಕ್ಕೆ ಕೂಡಲೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಬಳಿಕ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದೆ. ಸಿಎಂ ಯಡಿಯೂರಪ್ಪ ಅವರು ಈ ಕುರಿತು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡು, ಸರ್ಕಾರವೆ ಹಣ ಭರಿಸಿ ಉಚಿತ ಸ್ಕ್ಯಾನಿಂಗ್ ಮಾಡುವ ಯೋಜನೆ ಕಾರ್ಯರೂಪಕ್ಕೆ ತರುವ ಬಗ್ಗೆ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






