ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MAY 2021
ಕರೋನ ಸೋಂಕು ಹಲವರನ್ನು ಬಲಿ ಪಡೆದಿದೆ. ಆಪ್ತರನ್ನು, ಕುಟುಂಬದವರನ್ನು ಕಳೆದುಕೊಂಡು ಜನರು ದುಃಖದಲ್ಲಿದ್ದಾರೆ. ಇದೆ ಸಮಯವನ್ನು ಬಂಡವಾಳ ಮಾಡಿಕೊಂಡು ಹಲವರು ದುಡ್ಡು ಮಾಡುವ ದಂಧೆಗೆ ಇಳಿದಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಆವರಣದಲ್ಲಿ ಆಂಬುಲೆನ್ಸ್ನವರ ‘ದಾದಾಗಿರಿ’ ಇದಕ್ಕೆ ಉದಾಹರಣೆಯಾಗಿದ್ದು, ಶಾಸಕರೊಬ್ಬರು ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಕರೋನ ನಿಯಂತ್ರಣ ಸಂಬಂಧ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಆಂಬುಲೆನ್ಸ್ ದಾದಾಗಿರಿ ಬಗ್ಗೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಪ್ರಸ್ತಾಪಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದೇನು?
ಮೆಗ್ಗಾನ್ ಆಸ್ಪತ್ರೆಯ ಶವಾಗಾರದ ಬಳಿ ಆಂಬುಲೆನ್ಸ್ನವರ ದಾದಾಗಿರಿ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರು ಗಮನ ಹರಿಸಬೇಕು.
ಶವಾಗಾರದಿಂದ ನಮ್ಮೂರಿಗೆ ಮೃತದೇಹ ತರಲು ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ನಿಯಂತ್ರಣ ಹೇರಬೇಕು.

ನಮ್ಮೂರಿನಿಂದ ಬಂದ ಆಂಬುಲೆನ್ಸ್ಗಳಲ್ಲಿ ಮೃತದೇಹಗಳನ್ನು ಸಾಗಿಸಲು ಇಲ್ಲಿ ಅವಕಾಶವನ್ನೆ ನೀಡುತ್ತಿಲ್ಲ. ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವವರಿಗೆ ಈ ರೀತಿ ದಾದಾಗಿರಿ ಮಾಡುವುದು ಸರಿಯಲ್ಲ.
ಜಿಲ್ಲಾಧಿಕಾರಿ ಹೇಳಿದ್ದೇನು?
ಈಗಾಗಲೇ ಆಂಬುಲೆನ್ಸ್ಗಳಿಗೆ ಇಂತಿಷ್ಟು ರೇಟು ಎಂದು ನಿಗದಿಪಡಿಸಲಾಗಿದೆ. ಶವಾಗಾರದ ಬಳಿ ಅದರ ಬೋರ್ಡ್ ಕೂಡ ಹಾಕಲಾಗಿದೆ. ಆರ್ಟಿಒ ಮತ್ತು ಪೊಲೀಸರು ಒಳಗೊಂಡ ತಂಡ ರಚಿಸಿ ಶವಾಗಾರದ ಬಳಿ ನಿಯೋಜಿಸುವ ಯೋಚನೆ ಇದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















