ಸಣ್ಣ ವಿಚಾರಕ್ಕೆ ಕಿರಿಕ್, ಭದ್ರಾವತಿಯಲ್ಲಿ ಯುವಕನ ಬೆನ್ನಿಗೆ ಚಾಕು, ಹತ್ಯೆ ಮಾಡಿದ ಐವರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |  BHADRAVATHI NEWS | 26 MAY 2021

ಕ್ಷುಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವ ಯುವಕನ ಕೊಲೆಗೆ ಕಾರಣವಾಗಿದೆ. ಭದ್ರಾವತಿ ಹಳೆ ನಗರದ ಜೈ ಭೀಮ್ ನಗರದಲ್ಲಿ ಘಟನೆ ಸಂಭವಿಸಿದೆ. ಈ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಏನಿದು ಘಟನೆ? ಕೃತ್ಯಕ್ಕೆ ಕಾರಣವೇನು?

ಶ್ರೀಕಂಠ, ಸುನಿಲ್ ಮತ್ತು ರಹೀಂ ಎಂಬುವವರು ಜೈ ಭೀಮ್ ನಗರದ ತಮ್ಮ  ಮನೆ ಬಳಿ ಮಾತನಾಡುತ್ತ ನಿಂತಿದ್ದರು. ಈ ವೇಳೆ ನಿಶಾದ್ ಪಾಷಾ ಮತ್ತು ಮಹಮ್ಮದ್ ಜುನೇದ್ ಎಂಬುವವರು ಗುಟ್ಕಾ ತರಲು ಅಲ್ಲಿಗೆ ಬಂದಿದ್ದರು. ಮನೆ ಬಳಿ ನಿಂತು ಮಾತನಾಡುತ್ತಿದ್ದ ಯುವಕರು ‘ಪೊಲೀಸರು ಬರುತ್ತಾರೆ ಸೈಡಿಗೆ ಹೋಗಿ’ ಎಂದು ಹೇಳಿದ್ದಾರೆ.

ಇದರಿಂದ ಎರಡು ಗುಂಪಿನ ಯುವಕರ ನಡುವೆ ಮಾತಿನ ಚಕಮಕಿಯಾಗಿ, ಜಗಳವಾಗಿದೆ. ಆಕ್ರೋಶಗೊಂಡ ನಿಶಾದ್ ಪಾಷಾ ಫೋನ್ ಮಾಡಿ, ಸಾಬಿತ್ ಮತ್ತು ಇದಾಯತ್ ಅವರನ್ನು ಸ್ಥಳಕ್ಕೆ ಬರುವಂತೆ ತಿಳಿಸಿದ್ದ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆನ್ನಿಗೆ ಚಾಕು ಹಾಕಿದರು

ನಿಶಾದ್ ಪಾಷಾ ಫೋನ್ ಮಾಡಿದ್ದರಿಂದ ನಾಲ್ವರು ಜೈ ಭೀಮ್ ನಗರಕ್ಕೆ ಬಂದಿದ್ದಾರೆ. ತಾವು ತಂದಿದ್ದ ದ್ವಿಚಕ್ರ ವಾಹನವನ್ನು ಸುನಿಲ್‍ಗೆ ಗುದ್ದಿಸಿ ಕೆಳಗೆ ಬೀಳಿಸಿದ್ದಾರೆ. ಅಲ್ಲದೆ ಸುನಿಲ್ ಬೆನ್ನಿಗೆ ಚಾಕುವಿನಿಂದ ಚುಚ್ಚಿದ್ದಾರೆ. ಇದನ್ನು ಬಿಡಿಸಲು ಹೋದ ಶ್ರೀಕಂಠನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಆಸ್ಪತ್ರೆಯಲ್ಲಿ ಕೊನೆ ಉಸಿರು

ಗಾಯಗೊಂಡಿದ್ದ ಸುನಿಲ್ ಮತ್ತು ಶ್ರೀಕಂಠನನ್ನು ಸ್ಥಳೀಯರ ನೆರವಿನಿಂದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಮೃತಪಟ್ಟಿದ್ದಾನೆ.

ಐವರನ್ನು ಬಂಧಿಸಿದ ಪೊಲೀಸ್

ಘಟನೆ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅನ್ವರ್ ಕಾಲೋನಿಯ ಸಾಬೀತ್ (20), ಶಿವಮೊಗ್ಗ ಆರ್‍ಎಂಎಲ್ ನಗರದ ಇದಾಯತ್ (20), ಶಿವಮೊಗ್ಗದ ಬುದ್ಧನಗರದ ನಿಶಾದ್ ಪಾಷಾ (21), ಶಿವಮೊಗ್ಗ ಆರ್‍ಎಂಎಲ್‍ ನಗರದ ಮಹಮದ್ ಜುನೇದ್ (20) ಶಿವಮೊಗ್ಗ ಬುದ್ದಾನಗರದ ತಬ್ರೇಜ್ ಪಾಷಾ (21) ಎಂಬುವವರನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಬಳಕೆ ಮಾಡಿಕೊಂಡಿದ್ದ ಎರಡು ಬೈಕುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

186541785 1394951300866286 8653851293339167547 n.jpg? nc cat=104&ccb=1 3& nc sid=730e14& nc ohc=6kzx9IcIXRsAX8 gFq7& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment