ಶಿವಮೊಗ್ಗ ಲೈವ್.ಕಾಂ | SHIMOGA NEWS | 30 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರೋನ ನಿಯಂತ್ರಣದ ಕಡೆಯ ಅಸ್ತ್ರವಾಗಿ ಶಿವಮೊಗ್ಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಮೇ 31 ರಿಂದ ಜೂನ್ 7ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಈ ಅವಧಿಲ್ಲಿ ಪೊಲೀಸರಿಗೆ ಸಂಪೂರ್ಣ ಪವರ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಚಿವ ಈಶ್ವರಪ್ಪ ಅವರ ಹೇಳಿಕೆಯ ವಿಡಿಯೋ ವರದಿ ಇಲ್ಲಿದೆ.
ಮತ್ತೊಂದೆಡೆ ಶಿವಮೊಗ್ಗ ಜಿಲ್ಲಾಡಳಿತ ಅಗತ್ಯ ಮತ್ತು ತರ್ತು ಸೇವೆಗಳಿಗೆ ಅವಕಾಶ ಕಲ್ಪಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಜನಜೀವನಕ್ಕೆ ತೊಂದರೆಯಾಗದಂತೆ ಈ ಕ್ರಮ ವಹಿಸಲಾಗಿದೆ.
ಯಾವೆಲ್ಲ ಸೇವೆಗಳಿಗೆ ಅವಕಾಶವಿದೆ?
1 ) ಔಷಧಿ ಅಂಗಡಿಗಳು, ನೆರೆಹೊರೆಯಲ್ಲಿರುವ ತರಕಾರಿ, ಹಾಲು, ದಿನಸಿ ಅಂಗಡಿಗಳಿಗೆ ಮಾತ್ರ ಅವಕಾಶ.

2) ಸಗಟು ದಿನಸಿ ಮಳಿಗೆಗಳು, ಎಪಿಎಂಸಿಯಲ್ಲಿ ಮಾರಾಟಕ್ಕೆ ಅವಕಾಶ ಇರುವುದಿಲ್ಲ. ಆದರೆ ಚಿಲ್ಲರೆ ಅಂಗಡಿಗಳಿಗೆ ಅವರು ಸರಕುಗಳನ್ನು ನೇರವಾಗಿ ಪೂರೈಕೆ ಮಾಡಬಹುದಾಗಿದೆ.
3) ತಳ್ಳುಗಾಡಿಗಳಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಿಗದಿಪಡಿಸಲಾಗಿರುವ ಪ್ರದೇಶ ವ್ಯಾಪ್ತಿಯಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

4) ಅವಶ್ಯಕ ಸೇವೆಗಳಿಗೆ ಗುರುತಿಸಲಾಗಿರುವ ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಚೇರಿಗಳು ಇರುವುದಿಲ್ಲ.
5) ಬ್ಯಾಂಕಿಂಗ್ ಸೇವೆಯಲ್ಲಿ ಕನಿಷ್ಟ ಮಟ್ಟದಲ್ಲಿ ಸೇವೆ ಒದಗಿಸಲು ಅವಕಾಶವಿದೆ.
6) ಹೊಟೇಲ್ನಲ್ಲಿ ಅಲ್ಲಿಯೇ ಊಟ, ತಿಂಡಿ, ಕಾಫಿಗೆ ಅವಕಾಶವಿಲ್ಲ. ಪಾರ್ಸೆಲ್ ಸೇವೆಗೆ ಮಾತ್ರ ಅವಕಾಶ.
7) ಮಾರ್ಗಸೂಚಿ ಪ್ರಕಾರ ಮದುವೆಗೆ ಅವಕಾಶವಿದೆ. ಆದರೆ ಮದುವೆಗೆ ಸಂಬಂಧಿಸಿದ ಸಮಾರಂಭಗಳು, ರಿಸಪ್ಷನ್, ಬಾಡೂಟಕ್ಕೆ ಅವಕಾಶವಿಲ್ಲ.
ಇದನ್ನೂ ಓದಿ | ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್, ಏನಿರುತ್ತೆ? ಏನಿರಲ್ಲ?
8) ಗೃಹಪ್ರವೇಶ ಇತ್ಯಾದಿಗಳಿಗೆ ಅನುಮತಿ ಇರುವುದಿಲ್ಲ. ಇದನ್ನು ಉಲ್ಲಂಘಿಸಿ ಸಮಾರಂಭಗಳನ್ನು ಆಯೋಜಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.
9) ಈಗಾಗಲೇ ಜಿಲ್ಲಾಡಳಿತದಿಂದ ಅನುಮತಿ ನೀಡಲಾಗಿರುವ ಅಗತ್ಯ ಕೈಗಾರಿಕಾ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುವುದು. ಗಾರ್ಮೆಂಟ್ಸ್ ಸೇರಿದಂತೆ ಉಳಿದ ಕಾರ್ಖಾನೆಗಳು ಬಂದ್.
10) ಅಗತ್ಯ ಸರ್ಕಾರಿ ಕಾಮಗಾರಿಗಳು ಹಾಗೂ ಮಾನ್ಸೂನ್ ಪೂರ್ವ ಕಾಮಗಾರಿಗಳನ್ನು ಬಿಟ್ಟು ಬೇರೆ ಎಲ್ಲಾ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ಇರುವುದಿಲ್ಲ.

ಲಾಕ್ಡೌನ್ ಅವಧಿಯಲ್ಲಿ ಅನಗತ್ಯವಾಗಿ ರಸ್ತೆಗೆ ಬರುವ ವಾಹನಗಳನ್ನು ಜಪ್ತಿ ಮಾಡುವುದು ಮಾತ್ರವಲ್ಲದೆ, ಸವಾರರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಕಳೆದ 7 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸುವ ಉದ್ದೇಶದಿಂದ ಒಂದು ವಾರ ಕಾಲ ಕಠಿಣ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






