ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 JUNE 2021
ಸೋಂಕಿನ ಗುಣ ಲಕ್ಷಣವಿಲ್ಲದಿದ್ದರೂ ಕರೋನ ಪಾಸಿಟಿವ್ ಬಂದವರು ಕೋವಿಡ್ ಕೇರ್ ಸೆಂಟರ್ ಸೇರಬೇಕು ಅಂತಾ ಜಿಲ್ಲಾಡಳಿತ ಕಟ್ಟಪ್ಪಣೆ ಹೊರಡಿಸಿದೆ. ಆದರೆ ಕೇರ್ ಸೆಂಟರ್ಗೆ ಬಂದವರು ಮಾತ್ರ ನರಕ ಯಾತನೆ ಅನುಭವಿಸುವಂತಾಗಿದೆ. ಕೋವಿಡ್ ಕೇರ್ ಸೆಂಟರ್ನ ಒಳಗಿಂದ ಸೋಂಕಿತರು ತಾವು ಅನುಭವಿಸುತ್ತಿರುವ ಸಂಕಷ್ಟವನ್ನು ವಿರಿಸಿದ್ದಾರೆ.
ಸೋಂಕು ಹರಡುವುದನ್ನು ತಡೆಯಲು, ಮನೆ ಮಂದಿಯಲ್ಲ ಕರೋನಾಗೆ ತುತ್ತಾಗದಂತೆ ನೋಡಿಕೊಳ್ಳಲು ಕರೋನ ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲು ಮಾಡಲಾಗುತ್ತಿದೆ. ಆದರೆ ಈ ಕೇರ್ ಸೆಂಟರ್ಗಳತ್ತ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ.
ಇದು ಮಲ್ಲಿಗೇನಹಳ್ಳಿಯಲ್ಲಿ ಇರುವ ಕೋವಿಡ್ ಕೇರ್ ಸೆಂಟರ್. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಡಾ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ನಲ್ಲಿ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಇಲ್ಲಿ ಸುಮಾರು ಇನ್ನೂರು ಸೋಂಕಿತರಿದ್ದಾರೆ. ಇವರೆಲ್ಲ ಕರೋನ ಗುಣ ಲಕ್ಷಣವಿಲ್ಲದವರು. ಆದರೂ ಪಾಸಿಟಿವ್ ಬಂದ ಹಿನ್ನೆಲೆ ಕ್ವಾರಂಟೈನ್ ಮಾಡಲಾಗಿದೆ.
ಕೇರ್ ಸೆಂಟರ್ನಲ್ಲಿ ಅವಸ್ಥೆ
ಕೇರ್ ಸೆಂಟರ್ನ ಮುಂದೆ ರಾಶಿ ರಾಶಿ ಕಸ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಒಳಗಿರುವವರು ಊಟ, ತಿಂಡಿಯಲ್ಲಿ ಅಳಿದುಳಿದ್ದದ್ದನ್ನು ಬಿಸಾಡಿದ್ದೆಲ್ಲವು ಈ ಕಸದ ರಾಶಿಯಲ್ಲಿರುತ್ತದೆ. ಅಕ್ಕಪಕ್ಕದಿಂದ ಬರುವ ನಾಯಿಗಳು, ದನಕರುಗಳು ಇದನ್ನು ತಿನ್ನುತ್ತಿವೆ ಅಂತಾ ಆರೋಪಿಸುತ್ತಾರೆ ಇಲ್ಲಿರುವವರು. ಇನ್ನು, ಕೇರ್ ಸೆಂಟರ್ ಒಳಗಿರುವ ಕಸದ ಬುಟ್ಟಿ ಆಗಿಂದಾಗ್ಗೆ ಖಾಲಿ ಮಾಡತ್ತಿಲ್ಲ. ಮೂರ್ನಾಲ್ಕು ದಿನ ಹಾಗೆ ಇರುತ್ತದೆ.

ಶುಚಿತ್ವದ ವಿಚಾರ ಮಾತಾಡೋ ಹಾಗೆ ಇಲ್ಲ
ಒಳಗೆ ಬಿಡುಗಾಸಿನಷ್ಟೂ ಶುಚಿತ್ವ ಇಲ್ಲ ಎಂದು ಇಲ್ಲಿರುವವರು ಆರೋಪಿಸುತ್ತಾರೆ. ಶೌಚಾಲಯವನ್ನು ಕ್ಲೀನ್ ಮಾಡಿದ್ದನ್ನು ಇಲ್ಯಾರು ಕಂಡಿಲ್ಲವಂತೆ. ಇನ್ನು, ಕೊಠಡಿಗಳ ಕ್ಲೀನಿಂಗ್ ವಿಚಾರ ದೂರದ ಮಾತು. ಅಲ್ಲಿದ್ದರವರೆ ಕ್ಲೀನ್ ಮಾಡಿ ಮಲಗುತ್ತಿದ್ದಾರೆ. ಬೆಡ್ ಶೀಟ್ಗಳನ್ನು ಒಗೆದಿದ್ದು ಯಾವಾಗ ಅನ್ನುವುದು ಗೊತ್ತಿಲ್ಲ. ನಾವೆ ಒಗೆದುಕೊಳ್ಳುತ್ತೇವೆ ಅಂದರೂ ವ್ಯವಸ್ಥೆ ಇಲ್ಲ ಅನ್ನುತ್ತಾರೆ.

ಒಂದೇ ರೀತಿಯ ಊಟ, ತಿಂಡಿ
ಕರೋನ ಸೋಂಕಿತರಿಗೆ ಪೌಷ್ಠಿಕ ಆಹಾರ ಬೇಕು. ಆದರೆ ಇಲ್ಲಿಯ ಕೋವಿಡ್ ಕೇರ್ ಸೆಂಟರ್ನಲ್ಲಿ ಪ್ರತಿದಿನ ಒಂದೆ ಬಗೆಯ ಊಟ, ಒಂದೆ ರೀತಿಯ ಸಾಂಬಾರು, ಪಲ್ಯ. ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಅನ್ನುತ್ತಾರೆ ಒಳಗಿರುವವರು. ಮನೆಗೆ ಕಳುಹಿಸಿದರೆ ನಾವೆ ಪೌಷ್ಠಿಕಾಂಶಯುಕ್ತ ಆಹಾರ ತಯಾರಿಸಿಕೊಳ್ಳುತ್ತೇವೆ ಅನ್ನುತ್ತಾರೆ ಇಲ್ಲಿರುವ ಮಹಿಳೆಯರು.
ಡಾಕ್ಟರ್ ಓಕೆ, ಉಳಿದವರದ್ದೆ ಕಿರಿಕ್ಕು
ಇನ್ನು, ಇಲ್ಲಿ ವೈದ್ಯಕೀಯ ವ್ಯವಸ್ಥೆ ಚನ್ನಾಗಿದೆ. ವೈದ್ಯರು ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕೇರ್ ಸೆಂಟರ್ನಲ್ಲಿರುವವರ ಅಭಿಪ್ರಾಯ. ಆದರೆ ಉಳಿದ ಸಿಬ್ಬಂದಿಗಳು ಕೇರ್ ಸೆಂಟರ್ನಲ್ಲಿ ಇರುವವರನ್ನು ಬೆದರಿಸುತ್ತಿದ್ದಾರೆ. ಏನನ್ನಾದರೂ ವಿಚಾರಿಸಿದರೆ ಗದರುತ್ತಾರೆ ಎಂದು ಆರೋಪಿಸುತ್ತಾರೆ .
ಇನ್ನಾದರೂ ಜಿಲ್ಲಾಡಳಿತ ಈ ಕೇರ್ ಸೆಂಟರ್ಗಳಿಗೆ ಮೇಜರ್ ಸರ್ಜರಿ ಮಾಡಬೇಕಿದೆ. ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಬೇಕಿದೆ. ಅದಕ್ಕೆ ಪೂರಕವಾದ ವಾತಾವರಣ ನಿರ್ಮಿಸಬೇಕಿದೆ. ಇಲ್ಲವಾದಲ್ಲಿ ಸೋಂಕಿನ ಲಕ್ಷಣ ಕಂಡು ಬಂದರೂ ಜನರು ಭೀತಿಯಿಂದ ಟೆಸ್ಟ್ ಮಾಡಿಸಿಕೊಳ್ಳದೆ, ಮನೆಗಳಲ್ಲಿಯೇ ಉಳಿದುಕೊಂಡು ಅನಾಹುತ ಸೃಷ್ಟಿಸುವ ಸಾದ್ಯತೆ ಇದೆ.
ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















