ಸಕ್ರೆಬೈಲು ಆನೆ ಬಿಡಾರಕ್ಕೆ ತಲುಪಿದ ನೆರವು, ಕಡೆಗಣನೆಯಾಗಿದ್ದ ಕಾವಾಡಿಗಳಿಗೆ ವೈಲ್ಡ್ ಟಸ್ಕರ್ ‘ಅಭಯ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021

ಕೊರೊನಾ ಲಾಕ್ ಡೌನ್ ಸಂದರ್ಭ ಬಡವರಿಗೆ ವಿವಿಧ ಕ್ಷೇತ್ರಗಳಲ್ಲಿ ತೊಂದರೆಗೊಳದಾವರಿಗೆ ವಿವಿಧ ಸಂಘಸಂಸ್ಥೆಗಳು ಹಾಗು ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಜೀವವನ್ನು ಪಣಕ್ಕಿಟ್ಟು ಪ್ರತಿದಿನ ಆನೆಗಳೊಂದಿಗೆ ಕರ್ತವ್ಯ ನಿರ್ವಹಿಸುವ ಮಾವುತ ಕಾವಾಡಿಗಳನ್ನು ಸರ್ಕಾರ ಕಡೆಗಣಿಸಿದಂತಿದೆ. ಲಾಕ್ ಡೌನ್ ಸಂದರ್ಭದಲ್ಲಿ ಗುತ್ತಿಗೆ ಕಾವಾಡಿಗಳು ಸಂಕಷ್ಟದಲ್ಲಿದ್ದಾರೆ. ಆನೆ ಸಿಬ್ಬಂದಿಗಳ ಸಮಸ್ಯೆ ಅರಿತಿರುವ ವೈಲ್ಡ್ ಟಸ್ಕರ್ ಸಂಸ್ಥೆ ಕಾವಾಡಿಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ನೈತಿಕ ಸ್ಥೈರ್ಯ ತುಂಬಿದೆ.

ಸೆಕ್ರೆಬೈಲು ಆನೆ ಬಿಡಾರದಲ್ಲಿ ವೈಲ್ಡ್ ಟಸ್ಕರ್ ಸಂಸ್ಥೆ ಮೊದಲ ಹಂತದಲ್ಲಿ ಗುತ್ತಿಗೆ ಕಾವಾಡಿಗಳಿಗೆ ಆಹಾರದ ಕಿಟ್ ಹಾಗು ತರಕಾರಿಯ ಕಿಟ್ ನೀಡಿತು. ಸಂಸ್ಥೆಯ ಗೌರವ ಟ್ರಸ್ಟಿ ಎಂ. ಶ್ರೀಕಾಂತ್ ಹಾಗು ಶಿವಮೊಗ್ಗ ಪ್ರೆಸ್ಟ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಸಿಬ್ಬಂದಿಗಳಿಗೆ ಕಿಟ್ ವಿತರಿಸಿದರು.

ಇದೆ ವೇಳೆ ಮಾತನಾಡಿದ ಎನ್.ಮಂಜುನಾಥ್ ಅವರು, ಕಾಡಿನ ಮಕ್ಕಳು ಪ್ರತಿದಿನ ಜೀವನದ ಹಂಗು ತೊರೆದು ಆನೆಗಳ ಜೊತೆ ಕೆಲಸ ಮಾಡುತ್ತಾರೆ. ಪ್ರತಿ ದಿನವೂ ಅವರಿಗೆ ಸವಾಲಿನ ಕೆಲಸ. ಸಕ್ರೆಬೈಲು ಬಿಡಾರದ ಜೊತೆ ಶಿವಮೊಗ್ಗ ಪತ್ರಕರ್ತರು ಒಡನಾಟ ಹೊಂದಿದ್ದು, ಇಲ್ಲಿ ಸಿಬ್ಬಂದಿಗಳು ಎದುರಿಸುತ್ತಿರುವ ಸಮಸ್ಯೆ ಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಆನೆ ಸಿಬ್ಬಂದಿಗಳು ಕರ್ತವ್ಯದಲ್ಲಿ ಮಡಿದರೆ ಅವರಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಕೆಲಸದ ಭದ್ರತೆ ಇಲ್ಲ. ಇಂತಹ ಸಂದರ್ಭದಲ್ಲಿ ಕೊರೊನಾ ಸಂಕಷ್ಟ ಕಾಲ ಎದುರಾಗಿದೆ ಎಂದರು.

195265241 1401506610210755 7811213129212244615 n.jpg? nc cat=107&ccb=1 3& nc sid=730e14& nc ohc=E6uSN0ma UUAX86zhfO& nc ht=scontent.fblr20 1

ಬಡವರಿಗೆ ಹಾಗು ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಹಲವು ಸಂಘಸಂಸ್ಥೆಗಳು ಸ್ಪಂಧಿಸುತ್ತಿವೆ. ಆದರೆ ಈವರೆಗೂ ಮಾವುತ ಕಾವಾಡಿಗಳ ನೆರವಿಗೆ ಯಾರು ಮುಂದೆ ಬರಲಿಲ್ಲ. ಆದರೆ ವೈಲ್ಡ್ ಟಸ್ಕರ್ ಸಂಸ್ಥೆ ಆನೆ ಸಿಬ್ಬಂದಿಗಳು ಎದುರಿಸುತ್ತಿರುವ ಸಮಸ್ಯೆ ಅರಿತು ಮೊದಲ ಹಂತವಾಗಿ ಅವರಿಗೆ ಆಹಾರದ ಕಿಟ್  ವಿತರಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದೆ.  ಮುಂದೆಯೂ ಸಂಸ್ಥೆ ಆನೆ ಸಿಬ್ಬಂದಿಗಳ ಸಮಸ್ಯೆಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಿ ಎಂದು ಮಂಜುನಾಥ್ ಅವರು ಹೇಳಿದರು.

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಸಂಸ್ಥೆಯ ಗೌರವ ಟ್ರಸ್ಟಿಯಾಗಿರುವ ಎಂ. ಶ್ರೀಕಾಂತ್ ಮಾತನಾಡಿ, ಸರ್ಕಾರ ಘೋಷಣೆ ಮಾಡಿರುವ 500 ಕೋಟಿ ಬಜೆಟ್‍ನಲ್ಲಿ ಮಾವುತ ಕಾವಾಡಿಗಳನ್ನು ಕಡೆಗಣಿಸಿರುವುದು ವಿಪರ್ಯಾಸ ಎಂದು ಹೇಳಿದರು. ಅವರು ಕೂಡ ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅರಣ್ಯ ಸಿಬ್ಬಂದಿಗಳನ್ನು ಫ್ರಂಟ್ ಲೈನ್ ವಾರಿಯರ್ಸ್‍ಗಳೆಂದು ಪರಿಗಣಿಸಿ,ಅವರಿಗೂ ಉಚಿತ ಕೊರೊನಾ ಲಸಿಕೆಯನ್ನು ನೀಡಬೇಕು ಎಂದು ಆಗ್ರಹಿಸಿದರು.

ABHAYA HELPING HANDS 1 1

ವೈಲ್ಡ್ ಟಸ್ಕರ್ ಸಂಸ್ಥೆಯ ನಿರ್ದೇಶಕರಾದ ಜೇಸುದಾಸ್ ಮಾತನಾಡಿ, ಸಂಸ್ಥೆ ಮಾವುತ ಕಾವಾಡಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡುವ ಕೆಲಸ ಮಾಡುತ್ತಿದೆ. ಅವರ ಸಾಂಪ್ರದಾಯಿಕ ಪದ್ಥತಿಗಳನ್ನು ದೃಶ್ಯ ಹಾಗೂ ಅಕ್ಷರ ರೂಪದಲ್ಲಿ ದಾಖಲಿಸುತ್ತಿದೆ. ಸರ್ಕಾರ ಮಾವುತ ಕಾವಾಡಿಗಳಿಗೂ ಆರ್ಥಿಕ ನೆರವು ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಆನೆ ಸಿಬ್ಬಂದಿಗಳಿಗೆ ಆಹಾರದ ಕಿಟ್ ನೀಡಲು ನೆರವು ನೀಡಿದ ಎಂ. ಶ್ರೀಕಾಂತ್, ಸಂತೋಷ್ ಕುಮಾರ್ ನಡುಬೆಟ್ಟ, ಡಾಕ್ಟರ್ ಈರಣ್ಣ, ಹಾಗು ಜ್ಞಾನೇಶ್ ತೆಗ್ಗಿನ ಮಠ ಅವರ  ಸಹಕಾರಕ್ಕೆ ಧನ್ಯವಾದ ತಿಳಿಸಿದರು.

ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್‍ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.

192618317 1129535190859723 7122352764994844844 n.jpg? nc cat=111&ccb=1 3& nc sid=730e14& nc ohc=dtGUHByM mYAX8AS OE& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 5, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment