ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
ಅಬಕಾರಿ ಇಲಾಖೆ ಅಧಿಕಾರಿಗಳು ಇವತ್ತು ಮೂರು ಕಡೆ ದಾಳಿ ನಡೆಸಿದ್ದಾರೆ. ಕಳ್ಳಬಟ್ಟಿ ಮತ್ತು ಅದನ್ನು ತಯಾರಿಸಲು ಇರಿಸಿದ್ದ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ.
ಎಲ್ಲೆಲ್ಲಿ ದಾಳಿ ಮಾಡಲಾಗಿದೆ?
ದಾಳಿ 1 – ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲೂರು ಗ್ರಾಮದ ಬಲವೀಂದ್ರಪ್ಪ ಎಂಬುವವರ ಮನೆ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯ ಹಿಂಬದಿಯಲ್ಲಿ ಕಳ್ಳಬಟ್ಟಿ ತಯಾರಿಗೆ ಸಂಗ್ರಹಿಸಿ ಇಟ್ಟಿದ್ದ 110 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ.
ದಾಳಿ 2 – ಪ್ರವೀಣ್ ಎಂಬಾತನ ಮನೆ ಮೇಲೆ ದಾಳಿ ನಡೆಸಿದ್ದು, 20 ಲೀಟರ್ ಬೆಲ್ಲದ ಕೊಳೆ ಮತ್ತು 20 ಲೀಟರ್ ಕಳ್ಳಬಟ್ಟಿ ಸಾರಾಯಿ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ. ಎರಡು ಪ್ರಕರಣದಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಅಬಕಾರಿ ಇಲಾಖೆ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಸಾಗರ ಉಪ ವಿಭಾಗದ ಸಿಬ್ಬಂದಿಗಳು, ಸೊರಬ ವಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ದಾಳಿ 3 – ಸುಳ್ಳೂರು ಗ್ರಾಮದ ಧರ್ಮಪ್ಪ ಎಂಬುವವರ ಮನೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. 80 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






