SOCIAL MEDIA | ಆಗುಂಬೆ ಪೊಲೀಸ್ ಠಾಣೆ ಫೇಸ್​ಬುಕ್​​ ಪೋಸ್ಟ್​​ಗಳು ಸಿಕ್ಕಾಪಟ್ಟೆ ವೈರಲ್, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಜುಲೈ 2021

ಅಪರಾಧಿಗಳನ್ನು ಪತ್ತೆ ಹಚ್ಚುವುದು, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದಷ್ಟೆ ಪೊಲೀಸರ ಕರ್ತವ್ಯವಲ್ಲ. ಅಪರಾಧ ತಡೆ ಕುರಿತು ಜಾಗೃತಿ ಮೂಡಿಸುವುದು ಕೂಡ ಇಲಾಖೆ ಜವಾಬ್ದಾರಿಯಾಗಿದೆ. ಇದೆ ಉದ್ದೇಶದಿಂದ ಪೊಲೀಸ್ ಠಾಣೆಯೊಂದರ ಪಿಎಸ್‍ಐ ಒಬ್ಬರು ಆರಂಭಿಸಿದ ಫೇಸ್‍ಬುಕ್‍ ಖಾತೆ, ಈಗ ಠಾಣೆ ವ್ಯಾಪ್ತಿಯಲ್ಲಿ ಭಾರಿ ಮೆಚ್ಚುಗೆ ಗಳಿಸಿದೆ.

ಆಗುಂಬೆ ಪೊಲೀಸ್ ಠಾಣೆ ಹೆಸರಿನ ಫೇಸ್‍ಬುಕ್‍ ಖಾತೆ ಜನ ಮೆಚ್ಚುಗೆ ಗಳಿಸಿದೆ. ಇಲ್ಲಿ ಪ್ರಕಟವಾಗುತ್ತಿರುವ ಮಾಹಿತಿಗಳು ವೈರಲ್ ಆಗುತ್ತಿವೆ. ಹತ್ತಾರು ಕಡೆ ಷೇರ್ ಆಗುತ್ತಿವೆ.

ಫೇಸ್ಬುಕ್ನಲ್ಲಿ ಏನೇನೆಲ್ಲ ಪ್ರಕಟವಾಗುತ್ತಿದೆ

ಆಗುಂಬೆ ಪೊಲೀಸ್ ಠಾಣೆ ಫೇಸ್‍ಬುಕ್ ಖಾತೆ ಮಾಹಿತಿ ಕಣಜ. ವಂಚಕರ ಜಾಲದ ಕುರಿತು ಜಾಗೃತಿ ಮೂಡಿಸುವ ಫೋಟೊ, ಸಂದೇಶಗಳು ಇಲ್ಲಿವೆ. ಕರೋನ ಕುರಿತು ಮುನ್ನೆಚ್ಚರಿಕೆ ವಹಿಸುವ ಮಾಹಿತಿಗಳಿಗೆ. ರಸ್ತೆ ಸುರಕ್ಷತೆ, ಸಾಮಾಜಿಕ ಜಾಲತಾಣೆದಲ್ಲಿನ ವಂಚನೆಗಳ ಕುರಿತು ಮುನ್ನೆಚ್ಚರಿಕೆ ನೀಡಲಾಗುತ್ತಿದೆ. ಇದಿಷ್ಟೆ ಅಲ್ಲ ಇತ್ತೀಚೆಗೆ ಆರಂಭಿಸಲಾಗಿರುವ ದಿನಕ್ಕೊಂದು ಮಾಹಿತಿಯ ಸರಣಿ ವೈರಲ್ ಆಗಿವೆ. ಹೆಚ್ಚು ಲೈಕ್ಸ್, ಷೇರ್‍ಗಳನ್ನು ಹೊಂದಿದೆ.

ಠಾಣೆ ವ್ಯಾಪ್ತಿಯಲ್ಲಿ ಜಾಗೃತಿ

SOCIAL MEDIA NEWS LOGO 1 1

ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆಗಳನ್ನು ನಡೆಸಿ, ಕುಂದು ಕೊರತೆ ಆಲಿಸಲಾಗುತ್ತದೆ. ಆದರೆ ಒಮ್ಮೆಲೆ ಅತಿ ಹೆಚ್ಚು ಜನರನ್ನು ತಲುಪುವ ಸಲುವಾಗಿ ಫೇಸ್‍ಬುಕ್‍ ಖಾತೆ ಆರಂಭಿಸಲಾಗಿದೆ.

‘ಜಾಗೃತಿ ಸಭೆಗಳನ್ನು ಮಾಡಿದರೆ ಒಂದು ಕಡೆ ಸುಮಾರು 20 – 30 ಮಂದಿ ಸೇರಬಹುದು. ಆದರೆ ಬಹುತೇಕರು ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುತ್ತಾರೆ. ಇದೆ ಕಾರಣಕ್ಕೆ ಜಾಗೃತಿ ಸಭೆಗಳ ಜೊತೆಗೆ ಫೇಸ್‍ಬುಕ್ ಮೂಲಕವು ಜಾಗೃತಿ ಮೂಡಿಸಲಾಗುತ್ತಿದೆ’ ಅನ್ನುತ್ತಾರೆ ಪಿಎಸ್ಐ ಶಿವಕುಮಾರ್.

ನೆರವಿಗೆ ನಿಲ್ಲುತ್ತಾರೆ, ಭರವಸೆ ಮೂಡಿಸುತ್ತಾರೆ

ಸಾಮಾಜಿಕ ಜಲಾತಾಣ ಹೊರತಾಗಿ ಆಗುಂಬೆ ಠಾಣೆ ಪೊಲೀಸರು ಸ್ಥಳೀಯರ ಸಮಸ್ಯೆಗಳಿಗೆ ಕಿವಿಯಾಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ಅಭ್ಯರ್ಥಿಗಳಿಗೆ ಮಾರ್ಗದರ್ಶನ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ತುರ್ತು ಸಂದರ್ಭ ಹಲವರಿಗೆ ನೆರವಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಜನರಿಗೆ ಜಾಗೃತಿ ಮೂಡಿಸುತ್ತಿರುವುದು ಹೊಸ ಪ್ರಯತ್ನವಾಗಿದೆ ಅನ್ನುತ್ತಾರೆ ಸ್ಥಳೀಯರಾದ ನಿತ್ಯಾನಂದ ಆಗುಂಬೆ.

ಆಗುಂಬೆ ಠಾಣೆ ಪೊಲೀಸರ ಈ ಕಾರ್ಯ ಜನ ಮೆಚ್ಚುಗೆ ಪಡೆದಿದೆ. ಅಲ್ಲದೆ ಜನ ಜಾಗೃತರಾಗಲು ಅನುಕೂಲವಾಗಿದೆ.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

217412964 1153466125133296 488727578606883887 n.jpg? nc cat=107&ccb=1 3& nc sid=8bfeb9& nc ohc=36gkeGQZTRYAX9upBFu& nc ht=scontent.fblr1 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 13, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment