ಹರೋಹರ ಘೋಷಣೆಯೊಂದಿಗೆ ಹರಕೆ ತೀರಿಸಿದ ಭಕ್ತರು, ಜಾತ್ರೆ ರದ್ದಾದರೂ ಗುಡ್ಡೇಕಲ್ನಲ್ಲಿ ದೇವರ ದರ್ಶನಕ್ಕಿಲ್ಲ ತೊಡಕು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021

ಕಳೆದ ವರ್ಷದಂತೆ ಈ ಭಾರಿಯೂ ಆಡಿಕೃತ್ತಿಕೆ ಜಾತ್ರೆ ವೈಭವಕ್ಕೆ ಕರೋನ ಅಡ್ಡಿಯಾಗಿದೆ. ಮೂರನೆ ಅಲೆ ಭೀತಿಯ ಹಿನ್ನೆಲೆ ಜಾತ್ರೆ ರದ್ದುಗೊಳಿಸಲಾಗಿದೆ. ಆದರೆ ಕಾವಡಿ ಹೊತ್ತು ಬರುತ್ತಿರುವ ಭಕ್ತರು, ದೇವರಿಗೆ ಹರಕೆ ತೀರಿಸುತ್ತಿದ್ದಾರೆ.

ಶಿವಮೊಗ್ಗದ ಗುಡ್ಡೇಕಲ್ಲಿನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಆಡಿಕೃತ್ತಿಗೆ ಜಾತ್ರೆ ನಡೆಯಲಿದೆ. ಕೋವಿಡ್ ಭೀತಿಯ ಹಿನ್ನೆಲೆ ಕಳೆದ ವರ್ಷ ಮತ್ತು ಈ ಭಾರಿ ಜಾತ್ರೆ ರದ್ದುಗೊಳಿಸಲಾಗಿದೆ. ಹಾಗಾಗಿ ಯಾವುದೆ ವೈಭವವಿಲ್ಲದೆ, ವಿಶೇಷ ಪೂಜೆ, ದೇವರ ದರ್ಶನ ಮತ್ತು ಹರಕೆ ತೀರಿಸುವುದಕ್ಕಷ್ಟೆ ಆಚರಣೆ ಸೀಮಿತವಾಗಿದೆ.

ಕಾವಡಿ ಹೊತ್ತು ಬರುತ್ತಿರುವ ಭಕ್ತರು

ಆಡಿಕೃತ್ತಿಕೆ ಜಾತ್ರೆ ಹಿನ್ನೆಲೆ ಭಕ್ತರು ಕಾವಡಿಗಳನ್ನು ಹೊತ್ತು ಬರುತ್ತಿದ್ದಾರೆ. ದೂರದ ಊರುಗಳು, ಏರಿಯಾಗಳಿಂದ ಮಕ್ಕಳು, ಮಹಿಳೆಯರು ಸೇರಿದಂತೆ ಭಕ್ತರು ಕಾವಡಿಗಳನ್ನು ಹೊತ್ತು ನಡೆದು ಬರುತ್ತಿದ್ದಾರೆ. ಪ್ರತಿ ಭಾರಿಯಂತೆ ಈ ಭಾರಿಯೂ ದೊಡ್ಡ ತ್ರಿಶೂಲಗಳನ್ನು ತುಟಿ, ಕೆನ್ನೆಗೆ ಚುಚ್ಚಿಕೊಂಡು ಗುಡ್ಡ ಹತ್ತಿ ಹರಕೆ ತೀರಿಸುತ್ತಿದ್ದಾರೆ. ವಾದ್ಯದ ಶಬ್ದಕ್ಕೆ ಹೆಜ್ಜೆ ಹಾಕುತ್ತ, ಹರೋಹರ ಘೋಷಣೆ ಕೂಗುತ್ತ ಬಾಲಸುಬ್ರಹ್ಮಣ್ಯ ಸ್ವಾಮಿಗೆ ನಮನ ಸಲ್ಲಿಸುತ್ತಿದ್ದಾರೆ.

223390988 1166828920463683 4389499564621446413 n.jpg? nc cat=109&ccb=1 3& nc sid=730e14& nc ohc=JB10rgM2VYEAX ZV pa& nc ht=scontent.fblr1 6

ಲಕ್ಷ ಲಕ್ಷ ಭಕ್ತರು ಭಾಗಿಯಾಗುತ್ತಿದ್ದರು

ಆಡಿಕೃತ್ತಿಕೆ ಜಾತ್ರೆ ತಮಿಳು ಸಮುದಾಯದವರ ಪಾಲಿಗೆ ಪ್ರಮುಖ ಆಚರಣೆ. ಆದರೆ ಶಿವಮೊಗ್ಗ, ಭದ್ರಾವತಿ ಸೇರಿದಂತೆ ವಿವಿಧೆಡೆಯ ಎಲ್ಲಾ ಜಾತಿ, ವರ್ಗದ ಜನರು ಇದರಲ್ಲಿ ಭಕ್ತಿಯಿಂದ ಪಾಲ್ಗೊಳ್ಳುತ್ತಿದ್ದರು. ಲಕ್ಷ ಲಕ್ಷ ಭಕ್ತರು ಜಾತ್ರೆಯಲ್ಲಿ ಭಾಗಿಯಾಗುತ್ತಿದ್ದರು. ಗುಡ್ಡೆಕಲ್ ಸಮೀಪ ಹೊಳೆಹೊನ್ನೂರು ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿತ್ತು. ಆದರೆ ಈ ಭಾರಿಯೂ ಜಾತ್ರೆಗೆ ಕೋವಿಡ್ ಅಡ್ಡಿಯಾಗಿದೆ.

‘ಗುಡ್ಡೆಕಲ್ಲು ದೇವಸ್ಥಾನದ ಚರಿತ್ರೆಯಲ್ಲಿ ಎಂದಿಗೂ ಬಾಗಿಲು ಹಾಕಿರಲಿಲ್ಲ. ಕೋವಿಡ್ ಇರುವುದರಿಂದ ಜನರ ಹಿತದೃಷ್ಟಿಯಿಂದ ಎರಡು ವರ್ಷ ಜಾತ್ರೆ ರದ್ದುಗೊಳಿಸಲಾಗಿದೆ. ಭಕ್ತರು ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ. ದರ್ಶನಕ್ಕೆ ನಿರಾಕರಣೆ ಮಾಡಲು ಸಾಧ್ಯವಿಲ್ಲ. ಕೆಲವರು ಕಾವಡಿ ಹೊತ್ತು ಬಂದು ಹರಕೆ ತೀರಿಸುತ್ತಿದ್ದಾರೆ’ ಅನ್ನುತ್ತಾರೆ ಬಾಲಸುಬ್ರಹ್ಮಣ್ಯ ಸೇವಾ ಸಮಿತಿ ಅಧ್ಯಕ್ಷ ಎಂ.ರಾಜು.

ಕೋವಿಡ್ ನಿಂದಾಗಿ ಆಡಿಕೃತ್ತಿಗೆ ಜಾತ್ರೆ ಸೇರಿದಂತೆ ಹಲವು ವೈಭವಯುತ ಜಾತ್ರೆಗಳಿಗೆ ಬ್ರೇಕ್ ಬಿದ್ದಿದೆ. ಜನರು ಎಚ್ಚೆತ್ತುಕೊಂಡು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಸೋಂಕು ಹರಡುವುದಕ್ಕೆ ತಡೆಯೊಡ್ಡಬೇಕಿದೆ. ಮುಂದಿನ ವರ್ಷದಿಂದ ಪುನಃ ಜಾತ್ರೋತ್ಸವಗಳು ಕಣ್ತುಂಬಿಕೊಳ್ಳುವ ಅವಕಾಶವಾಗಲಿದೆ.

228356916 1166811053798803 1965196841935063570 n.jpg? nc cat=101&ccb=1 3& nc sid=730e14& nc ohc=IFrJ5kF3EdYAX IFEOP& nc ht=scontent.fblr1 4

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 3, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment