ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021
ಸ್ಮಾರ್ಟ್ ಸಿಟಿ ಕಾಮಗಾರಿಯ ಬಳಕೆಗಾಗಿ ಇರಿಸಿದ್ದ ಕಬ್ಬಿಣದ ಸರಳು, ನೀರಿನ ಟ್ಯಾಂಕರ್ ನಾಪತ್ತೆಯಾಗಿವೆ. ರಾತ್ರೋ ರಾತ್ರಿ ಕಳ್ಳರು ಇವುಗಳನ್ನು ಹೊತ್ತೊಯ್ದಿದ್ದು ದೂರು ದಾಖಲಾಗಿದೆ.
ಕಾಮಗಾರಿಗಾಗಿ 1500 ಕೆ.ಜಿ. ತೂಕದ ಕಬ್ಬಿಣದ ಸರಳುಗಳು ನಾಪತ್ತೆಯಾಗಿವೆ. ಇದರ ಮೌಲ್ಯ 67 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ನೀರಿನ ಟ್ಯಾಂಕರ್ ಕೂಡ ನಾಪತ್ತೆಯಾಗಿದೆ. ಅದರ ಮೌಲ್ಯ ಒಂದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಕೃಷಿನಗರ ಮತ್ತು ಬಸವೇಶ್ವರ ನಗರದ ರಾಜಾಕಾಲುವೆ ಕೆಲಸಕ್ಕಾಗಿ ಸರಳು ಮತ್ತು ಟ್ಯಾಂಕರ್ ತರಿಸಲಾಗಿತ್ತು. ಇಲ್ಲಿನ ಡಾಲರ್ಸ್ ಕಾಲೋನಿ ಸೇತುವೆ ಬಳಿ ಇವುಗಳನ್ನು ಇರಿಸಲಾಗಿತ್ತು. ರಾತ್ರೋ ರಾತ್ರಿ ಕಳ್ಳರು ಇವುಗಳನ್ನು ಹೊತ್ತೊಯ್ದಿದ್ದಾರೆ.
ಈ ಸಂಬಂಧ ಗುತ್ತಿಗೆದಾರ ಸಂಸ್ಥೆ ವತಿಯಿಂದ ದೂರು ನೀಡಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















