ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021
ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಿದೆ.
ಎರಡು ದಿನದಿಂದ ಭಾರಿ ಮಳೆಯಾಗುತ್ತಿದ್ದಂತೆ ತುಂಗಾ ಜಲಾಶಯದ ಒಳ, ಹೊರ ಹರಿವು ಹೆಚ್ಚಳವಾಗುತ್ತಿದೆ. ರಾತ್ರಿಯಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡುತ್ತಿರುವುದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ.
ಮಂಟಪ ಮುಳುಗಡೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಹಲವರು ತುಂಗಾ ನದಿ ಬಳಿಗೆ ಬರುತ್ತಿದ್ದಾರೆ. ಜೋರು ಮಳೆಯ ನಡುವೆಯು ಮಂಟಪ ಮುಳುಗಿರುವುದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200