ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021
ಮೂರು ದಿನದಿಂದ ಅಬ್ಬರಿಸಿದ್ದ ಪುಷ್ಯಾ ಮಳೆ ಬಿಡುವು ನೀಡಿದೆ. ಜಿಲ್ಲೆಯಾದ್ಯಂತ ಮಳೆ ಮರೆಯಾಗಿ ಸೂರ್ಯ ಪ್ರತ್ಯಕ್ಷವಾಗಿದ್ದು, ಪ್ರವಾಹದ ಆತಂಕದಲ್ಲಿದ್ದ ಜನರು ಈಗ ನಿರಾಳರಾಗಿದ್ದಾರೆ.
ಬಿಸಿಲಿನಿಂದ ಬೆಚ್ಚನೆ ವಾತಾವರಣ
ಬೆಳಗ್ಗೆಯಿಂದ ಬಿಸಿಲು ಕಾಣಿಸಿಕೊಂಡಿದ್ದು ಬೆಚ್ಚನೆ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲೂಕಿನಾದ್ಯಂತ ಬಿಸಿಲು ಕಾಣಿಸಿಕೊಂಡಿದೆ.
ಇದನ್ನೂ ಓದಿ | ಚಕ್ರಾ ವ್ಯಾಪ್ತಿಯಲ್ಲಿ ದಾಖಲೆ ಮಳೆ, ಮಾಸ್ತಿಕಟ್ಟೆಯಲ್ಲೂ ಜೋರು, 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ಎಷ್ಟಾಯ್ತು ಮಳೆ?
ಕಳೆದ 24 ಗಂಟೆ ಅವಧಿಯಲ್ಲಿ 380 ಮಿ.ಮೀ ಮಳೆಯಾಗಿದ್ದ ತೀರ್ಥಹಳ್ಳಿ ತಾಲೂಕಿನಲ್ಲೂ ಮಳೆ ಕಾಣೆಯಾಗಿದೆ. ದಾಖಲೆ ಮಳೆಯಾಗುವ ಆಗುಂಬೆಯಲ್ಲಿಯು ಬಿಸಿಲು ಪ್ರತ್ಯಕ್ಷವಾಗಿದೆ. ಆದರೆ ಘಾಟಿಯ ಅಲ್ಲಲ್ಲಿ ಮಣು ಕುಸಿದ ವರದಿಯಾಗಿದೆ.
ಇದನ್ನೂ ಓದಿ | ಹಳೆ ಶಿವಮೊಗ್ಗಕ್ಕೆ ನುಗ್ಗಿತು ತುಂಗಾ ನದಿ ನೀರು, ಎಲ್ಲೆಲ್ಲಿ ಹಾನಿಯಾಗಿದೆ?
ಹೊಸನಗರ ತಾಲೂಕಿನಲ್ಲೂ ವರುಣ ಬಿಡುವು ನೀಡಿದ್ದಾನೆ. ಹಾಗಾಗಿ ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ. ಗದ್ದೆ, ತೋಟಗಳಿಗೆ ನುಗ್ಗಿದ್ದ ನೀರನ್ನು ಹೊರಕ್ಕೆ ಹಾಕಲು ರೈತರು ಹರಸಾಹಸ ಮಾಡುತ್ತಿದ್ದಾರೆ.
ಇದನ್ನೂ ಓದಿ | ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಮೂರೂವರೆ ಅಡಿ ಹೆಚ್ಚಳ, ತುಂಗಾ ಜಲಾಶಯದ ಹೊರಹರಿವು ಎಷ್ಟಿದೆ ಗೊತ್ತಾ?
ಭಾರಿ ಮಳೆಗೆ ಸಾಕ್ಷಿಯಾಗಿದ್ದ ಸಾಗರ ತಾಲೂಕಿನಲ್ಲೂ ಮಳೆ ಮರೆಯಾಗಿ, ಸೂರ್ಯನ ದರ್ಶನವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 77.8 ಮಿ.ಮೀ ಮಳೆಯಾಗಿದೆ. ಈಗ ಮಳೆ ಕಡಿಮೆಯಾಗಿರುವುದರಿಂದ ಪ್ರವಾಹ ಭೀತಿಯಲ್ಲಿದ್ದ ಜನರು ಆತಂಕದಿಂದ ದೂರಾಗಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















