ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೂರು ದಿನದಿಂದ ಅಬ್ಬರಿಸಿದ್ದ ಪುಷ್ಯಾ ಮಳೆ ಬಿಡುವು ನೀಡಿದೆ. ಜಿಲ್ಲೆಯಾದ್ಯಂತ ಮಳೆ ಮರೆಯಾಗಿ ಸೂರ್ಯ ಪ್ರತ್ಯಕ್ಷವಾಗಿದ್ದು, ಪ್ರವಾಹದ ಆತಂಕದಲ್ಲಿದ್ದ ಜನರು ಈಗ ನಿರಾಳರಾಗಿದ್ದಾರೆ.
ಬಿಸಿಲಿನಿಂದ ಬೆಚ್ಚನೆ ವಾತಾವರಣ
ಬೆಳಗ್ಗೆಯಿಂದ ಬಿಸಿಲು ಕಾಣಿಸಿಕೊಂಡಿದ್ದು ಬೆಚ್ಚನೆ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲೂಕಿನಾದ್ಯಂತ ಬಿಸಿಲು ಕಾಣಿಸಿಕೊಂಡಿದೆ.
ಇದನ್ನೂ ಓದಿ | ಚಕ್ರಾ ವ್ಯಾಪ್ತಿಯಲ್ಲಿ ದಾಖಲೆ ಮಳೆ, ಮಾಸ್ತಿಕಟ್ಟೆಯಲ್ಲೂ ಜೋರು, 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ಎಷ್ಟಾಯ್ತು ಮಳೆ?
ಕಳೆದ 24 ಗಂಟೆ ಅವಧಿಯಲ್ಲಿ 380 ಮಿ.ಮೀ ಮಳೆಯಾಗಿದ್ದ ತೀರ್ಥಹಳ್ಳಿ ತಾಲೂಕಿನಲ್ಲೂ ಮಳೆ ಕಾಣೆಯಾಗಿದೆ. ದಾಖಲೆ ಮಳೆಯಾಗುವ ಆಗುಂಬೆಯಲ್ಲಿಯು ಬಿಸಿಲು ಪ್ರತ್ಯಕ್ಷವಾಗಿದೆ. ಆದರೆ ಘಾಟಿಯ ಅಲ್ಲಲ್ಲಿ ಮಣು ಕುಸಿದ ವರದಿಯಾಗಿದೆ.
ಇದನ್ನೂ ಓದಿ | ಹಳೆ ಶಿವಮೊಗ್ಗಕ್ಕೆ ನುಗ್ಗಿತು ತುಂಗಾ ನದಿ ನೀರು, ಎಲ್ಲೆಲ್ಲಿ ಹಾನಿಯಾಗಿದೆ?
ಹೊಸನಗರ ತಾಲೂಕಿನಲ್ಲೂ ವರುಣ ಬಿಡುವು ನೀಡಿದ್ದಾನೆ. ಹಾಗಾಗಿ ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ. ಗದ್ದೆ, ತೋಟಗಳಿಗೆ ನುಗ್ಗಿದ್ದ ನೀರನ್ನು ಹೊರಕ್ಕೆ ಹಾಕಲು ರೈತರು ಹರಸಾಹಸ ಮಾಡುತ್ತಿದ್ದಾರೆ.
ಇದನ್ನೂ ಓದಿ | ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಮೂರೂವರೆ ಅಡಿ ಹೆಚ್ಚಳ, ತುಂಗಾ ಜಲಾಶಯದ ಹೊರಹರಿವು ಎಷ್ಟಿದೆ ಗೊತ್ತಾ?
ಭಾರಿ ಮಳೆಗೆ ಸಾಕ್ಷಿಯಾಗಿದ್ದ ಸಾಗರ ತಾಲೂಕಿನಲ್ಲೂ ಮಳೆ ಮರೆಯಾಗಿ, ಸೂರ್ಯನ ದರ್ಶನವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 77.8 ಮಿ.ಮೀ ಮಳೆಯಾಗಿದೆ. ಈಗ ಮಳೆ ಕಡಿಮೆಯಾಗಿರುವುದರಿಂದ ಪ್ರವಾಹ ಭೀತಿಯಲ್ಲಿದ್ದ ಜನರು ಆತಂಕದಿಂದ ದೂರಾಗಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






