ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021
ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆಯುವುದು, ಟೈರ್ ಬಿಚ್ಚಿಕೊಂಡು ಹೋಗುವುದು, ಕಾರಿನ ಒಳಗಿದ್ದ ವಸ್ತುಗಳನ್ನು ಕದ್ದೊಯ್ಯುವ ಪ್ರಕರಣಗಳನ್ನು ಕೇಳಿದ್ದೇವೆ. ಈಗ ಕಾರಿನ ಸೈಲೆನ್ಸರ್ ಪೈಪನ್ನು ಕದ್ದೊಯ್ದಿರುವ ಪ್ರಕರಣ ವರದಿಯಾಗಿದೆ.
ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಸೈಲೆನ್ಸರ್ ಪೈಪನ್ನು ರಾತ್ರೋರಾತ್ರಿ ಕಳುವು ಮಾಡಲಾಗಿದೆ. ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿ ಘಟನೆ ವರದಿಯಾಗಿದೆ.
ಹೇಗಾಯ್ತು ಘಟನೆ?
ಮಂಜುನಾಥ ಬಡಾವಣೆಯ ಸತೀಶ್ ಕುಮಾರ್ ಅವರು ಪಾತ್ರೆ ವ್ಯಾಪಾರ ಮಾಡುತ್ತಾರೆ. ಇದಕ್ಕಾಗಿ ಕಾರು ಖರೀದಿಸಿದ್ದರು. ಜುಲೈ 18ರಂದು ರಾತ್ರಿ ಕಾರು ತಂದು ಮನೆ ಮುಂದೆ ನಿಲ್ಲಿಸಿದ್ದರು. ಆ ಬಳಿಕ ನಗರದಲ್ಲಿ ಭಾರಿ ಮಳೆಯಾಗಿದ್ದರಿಂದ ಸ್ವಲ್ಪ ದಿನ ವ್ಯಾಪಾರ ನಿಲ್ಲಿಸಿದ್ದರು.
ಬಳಿಕ ವ್ಯಾಪಾರಕ್ಕೆ ಕಾರು ಹೊರಗೆ ತೆಗೆಯಲು ಹೋದಾಗ ಸೈಲೆನ್ಸರ್ ಪೈಪ್ ನಾಪತ್ತೆಯಾಗಿರುವುದು ತಿಳಿದು ಬಂದಿದೆ. ರಾತ್ರೋರಾತ್ರಿ ಕಳ್ಳರು ಸದ್ದಿಲ್ಲದೆ ಸೈಲೆನ್ಸರ್ ಪೈಪ್ ಕಳುವು ಮಾಡಿರುವ ಶಂಕೆ ಇದೆ. ಇದರ ಮೌಲ್ಯ ಸುಮಾರು 74,500 ರೂ. ಎಂದು ಅಂದಾಜಿಸಲಾಗಿದೆ.
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















