ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2021 ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.
ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರು ನಡೆಸುತ್ತಿರುವ ದುಷ್ಕೃತ್ಯಗಳ ವಿರುದ್ಧ ವಿಚಾರವಾದಿಗಳು ಅನಿಸಿಕೊಳ್ಳುವವರು ಮಾತನಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಪ್ರಪಂಚದ ಯಾವುದೇ ರಾಷ್ಟ್ರದಲ್ಲಿ ಇರದಷ್ಟು ಶಾಂತಿಪ್ರಿಯತೆ, ಧರ್ಮ ಸಹಿಷ್ಣುತೆ ಭಾರತದಲ್ಲಿದೆ. ತಾಲಿಬಾನಿಗಳು ಅಫ್ಘಾನಿಸ್ಥಾನದಲ್ಲಿ ದುಷ್ಕೃತ್ಯ ಮೆರೆಯುತ್ತಿದ್ದಾರೆ. ಆದರೆ ವಿಚಾರವಾದಿಗಳು ಅಂತಾ ಹೇಳಿಕೊಳ್ಳುತ್ತಿರುವವರು ಅದರ ವಿರುದ್ಧ ಕನಿಷ್ಠ ಮಾತನಾಡಬೇಕು ಎಂದು ಆಗ್ರಹಿಸಿದರು.
ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರು ಹೆಣ್ಣು ಮಕ್ಕಳನ್ನು ಹೊತ್ತೊಯ್ದು ಅತ್ಯಾಚಾರ, ದಬ್ಬಾಳಿಕೆ ಮಾಡುತ್ತಿದ್ದಾರೆ. ಮಕ್ಕಳ ಬಗ್ಗೆ ಅವರು ನಡೆದುಕೊಳ್ಳುತ್ತಿರುವ ರೀತಿ ಸರಿಯಿಲ್ಲ. ಮನುಷ್ಯತ್ವವಿಲ್ಲದ ನಡೆಯುತ್ತಿರುವ ಚಟುವಟಿಕೆಗಳಾಗಿವೆ. ಇದನ್ನು ಯಾವ ನಾಗರಿಕರೂ ಬೆಂಬಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
