ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿದ ಅಧಿಕಾರಿಗಳು, ಹೇಗಿತ್ತು ಮೊದಲ ದಿನದ ಹೈಸ್ಕೂಲ್, ಪಿಯು ಕಾಲೇಜು ತರಗತಿಗಳು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಆಗಸ್ಟ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಆತಂಕದ ನಡುವೆಯು ರಾಜ್ಯಾದ್ಯಂತ ಶಾಲಾ – ಕಾಲೇಜುಗಳ ತರಗತಿಗಳು ಪುನಾರಂಭವಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಲ್ಲಿ ಪಾಠ ಶುರುವಾಗಿದೆ. ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೋವಿಡ್ ನಿಯಮ ಕಡ್ಡಾಯ ಪಾಲನೆಗೆ ಕ್ರಮ ಕೈಗೊಳ್ಳಾಗಿದೆ.

ವಿದ್ಯಾರ್ಥಿಗಳಿಗೆ ಆರತಿ ಬೆಳಗಿದ ಅಧಿಕಾರಿಗಳು

ಶಿವಮೊಗ್ಗದ ಕರ್ನಾಟಕ ಸಂಘ ಪಕ್ಕದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಶಾಲೆಗೆ ಸ್ವಾಗತಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಅವರು ಮಕ್ಕಳಿಗೆ ಆರತಿ ಬೆಳಗಿದರು.

ಥರ್ಮಲ್ ಸ್ಕ್ಯಾನಿಂಗ್, ಸಾಮಾಜಿಕ ಅಂತರ

ಕೋವಿಡ್ ತಡೆಗೆ ಪ್ರಕಟಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಸೂಚಿಸಿದೆ. ಅದರಂತೆ ಶಾಲೆ ಮತ್ತು ಕಾಲೇಜಿಗೆ ಆಗಮಿಸಿರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಯಿತು. ತರಗತಿಗಳಲ್ಲಿ ಸಾಮಾಜಿಕ ಅಂತರ ಕಾಪಾಡುವಂತೆ ಸೂಚಿಸಲಾಗಿತ್ತು. ಅದರಂತೆ ಪ್ರತಿ ಡೆಸ್ಕ್’ಗೆ ಇಬ್ಬರು ವಿದ್ಯಾರ್ಥಿಗಳನ್ನು ಕೂರಿಸಲಾಗಿತ್ತು.

ಮಿನಿಸ್ಟರ್ ಭೇಟಿ ಪರಿಶೀಲನೆ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಯಾರೂ ಆತಂಕಪಡಬಾರದು ಎಂದು ತಿಳಿಸಿದರು.

AVvXsEjqI8PPMNmhmzTK72s6aHdyGOwaxgBbnPaxEgdNmEiwLVxu2qPFWOl6pNSi5TkLjb7eVIwUDa7oTDLioeFYHsTaIvxkbizculAS6mYiPjBUAXSI3yUj FPfEWxml8DJztTgufNzviEAb8 E9X6L8I0JOYK4raqr

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಮಕ್ಕಳು ಓದಿನಲ್ಲಿ ಹಿಂದುಳಿಯಬಾರದು ಎಂಬ ಕಾರಣಕ್ಕೆ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದೇವೆ. ಅನೇಕ ಮಂದಿ ಇದನ್ನು ಟೀಕಿಸಿದ್ದಾರೆ. ಆದರೆ ಮಕ್ಕಳು ಓದಿನಲ್ಲಿ ಹಿಂದುಳಿಯಬಾರದು ಎಂಬುದು ನಮ್ಮ ಉದ್ದೇಶ. ಮಕ್ಕಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ. ಪೋಷಕರು ಕೂಡ ಭಯ ಬೀಳದೆ ಶಾಲೆ, ಕಾಲೇಜುಗಳಿಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.

ಸ್ಕೂಲು, ಕಾಲೇಜುಗಳಲ್ಲಿ ಉತ್ತಮ ಪ್ರತಿಕ್ರಿಯೆ

ಮೊದಲ ದಿನ ಶಾಲೆ, ಕಾಲೇಜುಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 465 ಪ್ರೌಢಶಾಲೆಗಳಿವೆ. ಇದರಲ್ಲಿ 9ನೇ ತರಗತಿಯ 25,405 ಮತ್ತು 10ನೇ ತರಗತಿಯ 24,600 ಸೇರಿ ಒಟ್ಟು 50,005 ವಿದ್ಯಾರ್ಥಿಗಳಿದ್ದಾರೆ.

ಜಿಲ್ಲೆಯಲ್ಲಿ 134 ಪಿಯುಸಿ ಕಾಲೇಜುಗಳಿವೆ. ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ 38 ಸಾವಿರ ವಿದ್ಯಾರ್ಥಿಗಳು ಜಿಲ್ಲೆಯಲ್ಲಿದ್ದಾರೆ. ನೂರಕ್ಕೂ ಅಧಿಕ ವಿದ್ಯಾರ್ಥಿಗಳು ತರಗತಿಯಲ್ಲಿರುವ ಕಡೆಗಳಲ್ಲಿ ಸೋಮವಾರದಿಂದ ಬುಧವಾರ ಮತ್ತು ಗುರುವಾರದಿಂದ ಶನಿವಾರದವರೆಗೆ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ.

ಶೇ.40ರಷ್ಟು ಶಿಕ್ಷಕರಿಗಷ್ಟೆ ಎರಡನೆ ಡೋಸ್

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಶಿಕ್ಷಕರು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಶೇ.40ರಷ್ಟು ಶಿಕ್ಷಕರು ಮಾತ್ರ ಈವರೆಗೂ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ದಿನ ಯಾವುದೆ ಗೊಂದಲದಲ್ಲಿ ಶಾಲೆ, ಕಾಲೇಜುಗಳು ಆರಂಭವಾಗಿದೆ. ವಿದ್ಯಾರ್ಥಿಗಳು ಕೂಡ ನಿರಾತಂಕವಾಗಿ ತರಗತಿಗಳಿಗೆ ಹಾಜರಾಗಿದ್ದು, ಉತ್ತಮ ಬೆಳವಣಿಗೆಯಾಗಿದೆ.

238274473 1178430235970218 2635873810325074933 n.jpg? nc cat=106&ccb=1 5& nc sid=730e14& nc ohc=RmV6nLXI3JwAX9gwRnl& nc ht=scontent.fblr1 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment