ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021
ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಲೋಕಕಲ್ಯಾಣಾರ್ಥವಾಗಿ ರುದ್ರಾಭಿಷೇಕ ನಡೆಸಲಾಯಿತು. ಊರಗಡೂರಿನ ಗುಡ್ಡೇಮರಡಿಯ ಮಲ್ಲೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಮತ್ತು ಸಭೆಯನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಮಹಿಳಾ ಮೋರ್ಛಾವನ್ನು ಮತ್ತಷ್ಟು ಬಲಗೊಳಿಸಲಾಗುವುದು. ಸಂಘಟನೆಗೆ ಆದ್ಯತೆ ನೀಡಲಾಗುವುದು. ಮಹಿಳಾ ಕಾರ್ಯಕರ್ತೆಯರು ಮತ್ತಷ್ಟು ಕ್ರಿಯಾಶೀಲಾರಾಗುವಂತೆ ಕರೆ ನೀಡಿದರು.
ಮಹಿಳಾ ಮೋರ್ಛಾ ನಗರಾಧ್ಯಕ್ಷೆ ಸುರೇಖಾ ಮುರಳೀಧರ್ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪರವರು, ನಗರಾಧ್ಯಕ್ಷ ಜಗದೀಶ್, ನಿಕಟಪೂರ್ವ ನಗರಾಧ್ಯಕ್ಷ ನಾಗರಾಜ್, ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಸದಸ್ಯರಾದ ಜ್ಞಾನೇಶ್ವರ್, ವಿದ್ಯಾ ಲಕ್ಷ್ಮೀಪತಿ, ರಾಧಾ ರಾಮಚಂದ್ರ, ರಶ್ಮಿ ಶ್ರೀನಿವಾಸ್, ಆರತಿ ಪ್ರಕಾಶ್, ಮಹಿಳಾ ಮೋರ್ಛಾ ಪದಾಧಿಕಾರಿಗಳು, ಸದಸ್ಯರು, ವಿವಿಧ ವಾರ್ಡ್ನ ಮಹಿಳಾ ಮೋರ್ಛಾ ಅಧ್ಯಕ್ಷೆ ಹಾಗೂ ಕಾರ್ಯದರ್ಶಿ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200