ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಳೆದ ಎರಡು ದಿನಗಳ ಹಿಂದೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಪಾನಮತ್ತ ನಾಲ್ಕೈದು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಕೂಡಲೇ ಗೃಹ ಸಚಿವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಆರ್. ಮಂಜು, ಪ್ರಮುಖರಾದ ಎಸ್. ಮಧು, ವಿಜಯಕುಮಾರ್, ಶೈಲೇಶ್ ಮುಂತಾದವರಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200