ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 26 ಫೆಬ್ರವರಿ 2019
ಅಂಬರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆಗೆ ಇದ್ದ ಅಡೆತಡೆಗಳೆಲ್ಲ ನಿವಾರಣೆಯಾಗಿದೆ. ಮೂರ್ನಾಲ್ಕು ದಿನದಲ್ಲಿ ಸಿಗಂದೂರು ಸೇತುವೆಗೆ ಕೇಂದ್ರ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ತುಮರಿಯಲ್ಲಿ ಡಿಜಿಟಲ್ ಗ್ರಾಮಕ್ಕೆ ಚಾಲನೆ ನೀಡಿದ ರಾಘವೇಂದ್ರ, ಕಳೆದ ವರ್ಷ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, 470 ಕೋಟಿಯ ಸಿಗಂದೂರು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ವನ್ಯಜೀವಿ ಸಂರಕ್ಷಣಾ ಇಲಾಖೆ ಮತ್ತು ಕೆಪಿಸಿ ಅಡ್ಡಗಾಲು ಹಾಕಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಶಾಸಕ ಹಾಲಪ್ಪ ಅವರ ಪ್ರಯತ್ನದಿಂದಾಗಿ, ಸಮಸ್ಯೆಗಳು ನಿವಾರಣೆಯಾಗಿದೆ ಎಂದರು.
ಟೆಂಡರ್ ಹಾದಿ ಸುಗಮ
ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿದೆ. ಹಾಗಾಗಿ ಟೆಂಡರ್ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂದು ಸಂಸದರ ರಾಘವೇಂದ್ರ ಸ್ಪಷ್ಟಪಡಿಸಿದರು.
ಶಾಸಕ ಹರತಾಳು ಹಾಲಪ್ಪ, ತಾಲೂಕ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ, ಡಿಜಿಟಲ್ ಇಂಡಿಯಾ ಯೋಜನೆಯ ರಾಜ್ಯ ಮುಖ್ಯಸ್ಥ ರಾಬರ್ಟ್ ಡಿ ನೆಲ್ಸನ್, ತಾಲೂಕು ಪಂಚಾಯಿತಿ ಸದಸ್ಯೆ ಸವಿತಾ ದೇವರಾಜ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com

LATEST NEWS
- ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

About The Editor
ನಿತಿನ್ ಆರ್.ಕೈದೊಟ್ಲು












