ಕಾಣಿಕೆ ಬದಲು ದೇವಸ್ಥಾನದ ಹುಂಡಿಗೆ ಚೂಯಿಂಗಮ್, ಒಬ್ಬ ಅರೆಸ್ಟ್, ಚೂಯಿಂಗಮ್ ಹಾಕುತ್ತಿದ್ದದ್ದು ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಸೆಪ್ಟೆಂಬರ್ 2021

ದೇವಸ್ಥಾನಕ್ಕೆ ಬಂದು ಭಕ್ತಿಯಿಂದ ಬೇಡಿಕೊಂಡು, ಹುಂಡಿಗೆ ಕಾಣಿಕೆ ಅರ್ಪಿಸುವ ಭಕ್ತರಿದ್ದಾರೆ. ಈ ಮಧ್ಯೆ ಒಬ್ಬಾತ ಹುಂಡಿಗೆ ಚೂಯಿಂಗಮ್ ಅಂಟಿಸಿದ ಕೋಲು ಹಾಕಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ಪೊಲೀಸರಿಗೆ ಹಿಡಿದು ಕೊಡಲಾಗಿದೆ. ಇನ್ನು, ಈತನ ಕುಕೃತ್ಯ ಈಗ ತೀರ್ಥಹಳ್ಳಿ ತಾಲೂಕಿನ ದೇವಸ್ಥಾನಗಳ ಆಡಳಿತ ಮಂಡಳಿ ನಿದ್ದೆಗೆಡಿಸಿದೆ.

ಭದ್ರಾವತಿ ತಾಲೂಕು ಬಾರಂದೂರಿನ ವಸಂತ ಕುಮಾರ್ (36) ಬಂಧಿತ. ತೀರ್ಥಹಳ್ಳಿ ತಾಲೂಕು ಮಹಿಷಿಯ ಅಶ್ವತ್ಥ ನಾರಾಯಣ ದೇವಸ್ಥಾನದ ಹುಂಡಿಗೆ ಚೂಯಿಂಗಮ್ ಅಂಟಿಸಿದ ಕೋಲು ಹಾಕಿ ಸಿಕ್ಕಿಬಿದ್ದಿದ್ದಾನೆ.

ಏನಿದು ಚೂಯಿಂಗಮ್ ತಂತ್ರ

ದೇವಸ್ಥಾನದ ಹುಂಡಿಯಲ್ಲಿರುವ ಹಣವನ್ನು ಕಳವು ಮಾಡಲು ವಸಂತ ಕುಮಾರ್ ಚೂಯಿಂಗಮ್ ತಂತ್ರ ಮಾಡಿದ್ದ. ಕೋಲಿನ ತುದಿಗೆ ಚೂಯಿಂಗಮ್ ಅಂಟಿಸಿ ಅದನ್ನು ಹುಂಡಿಯೊಳಗೆ ಇಳಿಸಿ ನೋಟುಗಳನ್ನು ಕದಿಯುತ್ತಿದ್ದ.

NH nephrolody%2Bad %2Bkannada 10

ಸಿಕ್ಕಿಬಿದ್ದಿದ್ದು ಹೇಗೆ?

ಬಾರಂದೂರಿನ ವಸಂತ ಕುಮಾರ್ ಮಹಿಷಿಯ ಅಶ್ವತ್ಥ ನಾರಾಯಣ ದೇವಸ್ಥಾನಕ್ಕೆ ಆಗಾಗ ಬರುತ್ತಿದ್ದ. ಸುತ್ತಮುತ್ತಲ ಜನರಿಗೆ ಈತ ಅಪರಿಚಿತನಾಗಿದ್ದ. ಅಲ್ಲದೆ ಯಾರೂ ಇಲ್ಲದ ವೇಳೆಯಲ್ಲಿ ದೇಗುಲ ಪ್ರವೇಶಿಸುತ್ತಿದ್ದ. ಇದು ಅನುಮಾನಕ್ಕೆ ಪ್ರಮುಖ ಕಾರಣವಾಗಿತ್ತು. ಇನ್ನು, ದೇವಸ್ಥಾನದಲ್ಲಿ ಹುಂಡಿ ಹಣ ಕಳವಾಗುತ್ತಿರುವ ಬಗ್ಗೆ ಆಡಳಿತ ಮಂಡಳಿಗೆ ಅನುಮಾನವಿತ್ತು. ಹಾಗಾಗಿ ಸಿಸಿಟಿವಿ ಮೂಲಕ ನಿಗಾ ವಹಿಸಲಾಗಿತ್ತು.

ಚೂಯಿಂಗಮ್ ಸಹಿತ ಸಿಕ್ಕಿಬಿದ್ದ

ಮಹಿಷಿ ದೇವಸ್ಥಾನದ ಹುಂಡಿಯಲ್ಲಿ ಚೂಯಿಂಗಮ್ ಇಳಿಸಿ ಹಣ ಕದಿಯುತ್ತಿದ್ದಾಗಲೇ ವಸಂತಕುಮಾರ್ ಸಿಕ್ಕಿಬಿದ್ದಿದ್ದಾನೆ. ಸಿಸಿಟಿವಿಯಲ್ಲಿ ಈತನ ಕೃತ್ಯ ಗಮನಿಸಿದ ಆಡಳಿತ ಮಂಡಳಿ ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಇತರೆ ದೇವಸ್ಥಾನದ ಅಡಳಿತ ಮಂಡಳಿಯ ನಿದ್ದೆಗೆಡಿಸಿದೆ. ಈಗ ಪ್ರತಿಯೊಬ್ಬರು ಹುಂಡಿ ಬಳಿಗೆ ಬರುವ ಭಕ್ತರ ಮೇಲೆ ನಿಗಾ ವಹಿಸುವಂತಾಗಿದೆ.

ವಸಂತ ಕುಮಾರನನ್ನು ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 7, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment